ಮೈಸೂರು

ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ| ಜಿಲ್ಲೆಯಲ್ಲಿ 60 ಕಿ,ಮೀ ಮಾನವ ಸರಪಳಿ, 60 ಸಾವಿರ ಜನ ಭಾಗಿ – ಡಿ.ಸಿ. ಲಕ್ಷ್ಮೀಕಾಂತ ರೆಡ್ಡಿ

ಕೈ- ಕೈ ಜೋಡಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ

ಮೈಸೂರು:  “ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲೆಯಾದ್ಯಂತ 60 ಕಿ.ಮೀ. ಮಾನವ ಸರಪಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷೀಕಾಂತ ರೆಡ್ಡಿ  ಹೇಳಿದರು.

ಇಂದು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ “ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ” (ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯ) ಎಂಬ ಧೈಯವಾಕ್ಯದೊಂದಿಗೆ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಆಚರಿಸುವ ಸಂಬಂಧ ಕಾರ್ಯಕ್ರಮಗಳ ರೂಪುರೇಷೆ ಕುರಿತಂತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ಎಂಬುದು ಕೇವಲ ಅಧಿಕಾರಿಗಳದ್ದಲ್ಲ. ಇದು ಪ್ರತಿಯೊಬ್ಬ ವ್ಯಕ್ತಿಯದ್ದಾಗಿದೆ. ಇಂತಹ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸ್ವಯಿಚ್ಛೆಯಿಂದ ಪಾಲ್ಗೊಂಡಾಗ ಮಾತ್ರವೇ ನಿರೀಕ್ಷಿಸಿದ ಪ್ರತಿಫಲ ದೊರೆತು, ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಹಾಗಾಗಿ ಸರಪಳಿಯು ಏರ್ಪಡುವ ಸ್ಥಳಗಳಲ್ಲಿ ಜನರು ನಮ್ಮೊಂದಿಗೆ ಸಹಕರಿಸಬೇಕು ಎಂದರು.

ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಬೆಳಗ್ಗೆ 8:30 ಗಂಟೆಯಿಂದ 9:30 ಗಂಟೆಯವರೆಗೆ ನಡೆಯಲಿದ್ದು, ಸರಪಳಿಯು ಸಿದ್ದಲಿಂಗಪುರದಿಂದ ಆರಂಭಗೊಳ್ಳುತ್ತದೆ. ಮುಂದುವರೆದಂತೆ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರು ಇರುವ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮುಂದುವರೆಯುತ್ತದೆ.

ಮಾನವ ಸರಪಳಿಯನ್ನು ನಿರ್ಮಾಣ ಮಾಡಲು ಸುಮಾರು 60 ಸಾವಿರಕ್ಕೂ ಹೆಚ್ಚಿನ ಜನರ ಅವಶ್ಯಕತೆ ಇದ್ದು, ಇದಕ್ಕೆ ಅಧಿಕಾರಿಗಳು, ಶಾಲಾ -ಕಾಲೇಜು ವಿದ್ಯಾರ್ಥಿಗಳು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು, ಎನ್ ಸಿ ಸಿ , ಎನ್ ಎಸ್ ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಪೌರ ಕಾರ್ಮಿಕರು, ಗ್ರಾಮ ಪಂಚಾಯಿತಿಯ ಸದಸ್ಯರು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡು ಸರಪಳಿಯು ಯಶಸ್ವಿಗೊಳ್ಳುವಂತೆ ನೋಡಿಕೊಳ್ಳಬೇಕು. ಇದಕ್ಕೆ ವಿದ್ಯಾಸಂಸ್ಥೆಗಳು, ಸಂಘ ಸಂಸ್ಥೆಗಳು ಹಾಗೂ ಇಲಾಖೆಗಳು ಸಹಕರಿಸಬೇಕು ಎಂದು ಹೇಳಿದರು.

ಸರಪಳಿಯು ಆರಂಭವಾದ ಪ್ರತಿ 100 ಮೀಟರ್ ಗೆ ಒಬ್ಬರು ಸೆಕ್ಷನ್ ಅಧಿಕಾರಿ, ಪ್ರತಿಯೊಂದು ಕಿಲೋಮೀಟರ್ ಗೆ ಏರಿಯಾ ಆಫೀಸರ್ ಹಾಗೂ ಪ್ರತಿ ಮಲ್ಟಿಪಲ್ ಕಿಲೋಮಿತೆ ಒಬ್ಬರು ತಾಲೂಕು ಅಧಿಕಾರಿಯನ್ನು ನೇಮಿಸಲಾಗಿರುತ್ತದೆ. ಅವರು ತಮ್ಮ ವ್ಯಾಪ್ತಿಗೆ ಜನರನ್ನು ಸೇರಿಸಿ ಸರಪಳಿಯನ್ನು ನಿರ್ಮಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ತಿಳಿಸಿದರು.

ಇದೊಂದು ಸರ್ಕಾರದ ಮಹತ್ವಕಾಂಕ್ಷೆ ಕಾರ್ಯಕ್ರಮವಾಗಿದ್ದು, ಇದನ್ನು ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕು. ಮುಂಬರುವ ದಿನಗಳಲ್ಲಿ ಈ ಸಂಬಂಧ ಹಲವಾರು ಸಭೆಗಳನ್ನು ನಡೆಸಿ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ ಮಾತನಾಡಿ, ಸರ್ಕಾರವು ವಹಿಸಿರುವಂತೆ ಜಿಲ್ಲೆಯಲ್ಲಿ 60 ಕಿ ಮೀ ಮಾನವ ಸರಪಳಿಯನ್ನು ನಿರ್ಮಾಣ ಮಾಡಲು ಜಿಲ್ಲೆಯಲ್ಲಿನ ನಿರ್ದಿಷ್ಟ ಅಂತರಕ್ಕೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದ್ದು, ನೇಮಕಗೊಂಡ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಜನರನ್ನು ಸೇರಿಸಿ ಸರಪಳಿ ನಿರ್ಮಿಸಿ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮಾತನಾಡಿ, ಈ ಬಗೆಗೆ ಹೆಚ್ಚು ಪ್ರಚಾರ ನೀಡಬೇಕು, ಕರಪತ್ರ, ಭಿತ್ತಿಪತ್ರಗಳ ಮೂಲಕ ಎಲ್ಲಾ ವರ್ಗದ ಜನರು ಭಾಗಿಯಾಗುವಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಡಾ ಆಯುಕ್ತರಾದ ರಘುನಂದನ್ ಎ ಎನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿದ್ಯಾಸಂಸ್ಥೆಯ ಮುಖ್ಯಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago