ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು.
ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ ಯೋಗ ದಿನಾಚರಣೆಯಲ್ಲಿ ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಗೂ ಜವಹರ್ ಲಾಲ್ ನವೋದಯ ವಿದ್ಯಾಲಯವು ನೇತೃತ್ವ ವಹಿಸಿತ್ತು. ಜೊತೆಗೆ ಉರ್ದು ಶಾಲೆ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಉನ್ನತ ಶಿಕ್ಷಣ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆರ್ಮಸ್ಟ್ರಾಂಗ್ ಪಾಮೆ, ಉತ್ತಮ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ. ದಿನನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಯೋಗ ನಡೆಯುತ್ತಿದೆ. ಇದೊಂದು ಉತ್ತಮವಾದ ಅನುಭವ. ಜಗತ್ತಿಗೆ ಭಾರತ ಯೋಗವನ್ನು ಕೊಡುಗೆಯಾಗಿ ನೀಡಿದೆ.
ಯೋಗ ಅಳವಡಿಸಿಕೊಂಡು ದೈಹಿಕವಾಗಿ ಉತ್ತಮವಾಗುವುದರ ಜೊತೆಗೆ ಜೀವನಕ್ಕೆ ಉತ್ತೇಜನ ನೀಡುತ್ತದೆ ಎಂದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…