ಮೈಸೂರು

ಸೋಮನಾಥಪುರ ಚನ್ನಕೇಶವ ದೇವಾಲಯದ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು.

ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ ಯೋಗ ದಿನಾಚರಣೆಯಲ್ಲಿ ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಗೂ ಜವಹರ್ ಲಾಲ್ ನವೋದಯ ವಿದ್ಯಾಲಯವು ನೇತೃತ್ವ ವಹಿಸಿತ್ತು. ಜೊತೆಗೆ ಉರ್ದು ಶಾಲೆ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಉನ್ನತ ಶಿಕ್ಷಣ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆರ್ಮಸ್ಟ್ರಾಂಗ್ ಪಾಮೆ, ಉತ್ತಮ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ. ದಿನನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ ಎಂದು  ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಯೋಗ ನಡೆಯುತ್ತಿದೆ. ಇದೊಂದು ಉತ್ತಮವಾದ ಅನುಭವ. ಜಗತ್ತಿಗೆ ಭಾರತ ಯೋಗವನ್ನು ಕೊಡುಗೆಯಾಗಿ ನೀಡಿದೆ.
ಯೋಗ ಅಳವಡಿಸಿಕೊಂಡು ದೈಹಿಕವಾಗಿ ಉತ್ತಮವಾಗುವುದರ ಜೊತೆಗೆ ಜೀವನಕ್ಕೆ ಉತ್ತೇಜನ ನೀಡುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

1 hour ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

4 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

9 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

9 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

9 hours ago