ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು.
ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ ಯೋಗ ದಿನಾಚರಣೆಯಲ್ಲಿ ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಗೂ ಜವಹರ್ ಲಾಲ್ ನವೋದಯ ವಿದ್ಯಾಲಯವು ನೇತೃತ್ವ ವಹಿಸಿತ್ತು. ಜೊತೆಗೆ ಉರ್ದು ಶಾಲೆ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಉನ್ನತ ಶಿಕ್ಷಣ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆರ್ಮಸ್ಟ್ರಾಂಗ್ ಪಾಮೆ, ಉತ್ತಮ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ. ದಿನನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಯೋಗ ನಡೆಯುತ್ತಿದೆ. ಇದೊಂದು ಉತ್ತಮವಾದ ಅನುಭವ. ಜಗತ್ತಿಗೆ ಭಾರತ ಯೋಗವನ್ನು ಕೊಡುಗೆಯಾಗಿ ನೀಡಿದೆ.
ಯೋಗ ಅಳವಡಿಸಿಕೊಂಡು ದೈಹಿಕವಾಗಿ ಉತ್ತಮವಾಗುವುದರ ಜೊತೆಗೆ ಜೀವನಕ್ಕೆ ಉತ್ತೇಜನ ನೀಡುತ್ತದೆ ಎಂದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…