ಮೈಸೂರು

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ‘ಸ್ಕೈ ಗೋಲ್ಡ್ಸ್ ಅಂಡ್ ಡೈಮಂಡ್ಸ್’ ಎಂಬ ಚಿನ್ನದ ಅಂಗಡಿಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಜೊತೆಗೆ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನು ಓದಿ: ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ಮುಸುಕು ಧರಿಸಿದ ದರೋಡೆಕೋರರು ಅಂಗಡಿಗೆ ನುಗ್ಗಿ, ಆಯುಧಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ನಂತರ ಮ್ಯಾನೇಜರ್​ ಮೇಲೆ ಗುಂಡಿನ ದಾಳಿ ನಡೆಸಿ ಬರೋಬ್ಬರಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ, ಬಳಿಕ ಅಂಗಡಿಯ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ದರು. ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡರು ಎನ್ನಲಾಗಿದೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇತರರು ಮುಸುಕು ಧರಿಸಿದ್ದರು ಎಂದು ತಿಳಿದು ಬಂದಿದೆ.

ಇನ್ನೂ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

12 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

21 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

21 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

21 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

21 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

21 hours ago