ಮೈಸೂರು

ಹುಣಸೂರು | ವಿಜೃಂಭಣೆಯ ದೊಡ್ಡ ಆಲದ ಮರದ ಜಾನಪದ ಜಾತ್ರೆ

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.

ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.

ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್‌ರಾವ್ ಕೇಸರ್‌ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

20 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

41 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

3 hours ago