ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.
ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.
ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.
ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್ರಾವ್ ಕೇಸರ್ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್ಎಸ್ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…