ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.
ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.
ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.
ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್ರಾವ್ ಕೇಸರ್ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್ಎಸ್ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…