ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.
ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.
ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.
ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್ರಾವ್ ಕೇಸರ್ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್ಎಸ್ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…