ಮೈಸೂರು

ಹುಣಸೂರು | ವಿಜೃಂಭಣೆಯ ದೊಡ್ಡ ಆಲದ ಮರದ ಜಾನಪದ ಜಾತ್ರೆ

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.

ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.

ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್‌ರಾವ್ ಕೇಸರ್‌ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago