ಮೈಸೂರು

ಹುಣಸೂರು | ವಿಜೃಂಭಣೆಯ ದೊಡ್ಡ ಆಲದ ಮರದ ಜಾನಪದ ಜಾತ್ರೆ

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.

ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.

ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್‌ರಾವ್ ಕೇಸರ್‌ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

5 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

8 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

11 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

11 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

11 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

11 hours ago