ಮೈಸೂರು

ಹುಣಸೂರು | ಪತ್ನಿಯೊಂದಿಗೆ ಅಕ್ರಮ ಸಂಬಂಧ ಆರೋಪ ; ಸ್ನೇಹಿತನಿಗೆ ಚಾಕು ಇರಿತ

ಸ್ನೇಹಿತನಿಗೆ ಇರಿತ; ಮಗ, ತಾಯಿ ಬಂಧನ

ಹುಣಸೂರು: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಕುಪಿತಗೊಂಡು ತನ್ನ ಸ್ನೇಹಿತನಿಗೆ ಬಿಯರ್ ಬಾಟಲಿಯಿಂದ ಚುಚ್ಚಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಬಳಿಯ ಶಾರದ ಸರ್ವೀಸ್ ಸ್ಟೇಷನ್‌ನಲ್ಲಿ ನಡೆದಿದೆ.

ಹಳೇಬೀಡು ಗ್ರಾಮದ ಚೆಲುವರಾಜು ಅವರ ಪುತ್ರ ಅನಿಲ್ ತೀವ್ರವಾಗಿ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಅನಿಲ್ ಮತ್ತು ಈತನ ಸ್ನೇಹಿತ ಅಭಿಲಾಷ್ ಶಾರದ ಸರ್ವೀಸ್ ಸ್ಟೇಷನ್‌ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಅಭಿಲಾಷ್‌ನ ಪತ್ನಿ ೬ ತಿಂಗಳ ಹಿಂದೆ ಗಂಡನನ್ನು ತೊರೆದಿದ್ದಳು. ಇದಕ್ಕೆ ಸ್ನೇಹಿತ ಅನಿಲ್‌ನೇ ಕಾರಣ ಎಂದು ಆಕ್ರೋಶಿತನಾಗಿದ್ದ ಅಭಿಲಾಷ್ ಮಂಗಳವಾರ ಸರ್ವೀಸ್ ಸ್ಟೇಷನ್‌ಗೆ ತಾಯಿಯೊಂದಿಗೆ ಆಗಮಿಸಿ ಏಕಾಏಕಿ ಬಿಯರ್ ಬಾಟಲಿಯಿಂದ ಅನಿಲ್‌ನ ಕುತ್ತಿಗೆ, ಹೊಟ್ಟೆ ಭಾಗಕ್ಕೆ ಚುಚ್ಚಿದ್ದಾನೆ. ತೀವ್ರ ಅಸ್ಪಸ್ಥನಾದ ಆತನನ್ನು ಸ್ಥಳದಲ್ಲಿದ್ದವರು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಹುಣಸೂರು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಆರೋಪಿಗಳ ಬೆನ್ನಟ್ಟಿದ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್ ತಂಡ ಮೈಸೂರು ಬಳಿಯ ನಾಗವಾಲದಲ್ಲಿ ಆರೋಪಿಗಳಾದ ಕಾಡನಕೊಪ್ಪಲಿನ ಶಿವರಾಂ ಪುತ್ರ ಅಭಿಲಾಷ್ ಹಾಗೂ ಈತನ ತಾಯಿ ಲಕ್ಷ್ಮಮ್ಮ ಅವರನ್ನು ವಶಕ್ಕೆ ಪಡೆದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

3 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

4 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

4 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

4 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

5 hours ago