ಹುಣಸೂರು: ಸ್ಯಾಂಟ್ರೋ ಕಾರು ಡಿಕ್ಕಿ ಒಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಾಳಗೆರೆ ಜಂಕ್ಷನ್ ಬಳಿ ನಡೆದಿದೆ.
ನಗರದ ಕಾಫಿ ವರ್ಕ್ಸ್ ಆವರಣದಲ್ಲಿರುವ ಶೀತಾ ಟ್ರೇಡರ್ಸ್ ಮಾಲೀಕ ರವಿ ಸಾಲಿಯಾನ ಉರುಫ್ ವಾಲೆ ರವಿ (೪೪) ಮೃತಪಟ್ಟವರು.
ಶನಿವಾರ ರಾತ್ರಿ ೧೦.೩೦ರ ಸಮಯದಲ್ಲಿ ರವಿ ಸಾಲಿಯಾನ ತಮ್ಮ ಸ್ಕೂಟರ್ನಲ್ಲಿ ಹಾಳಗೆರೆಯಲ್ಲಿನ ಸ್ನೇಹಿತರ ಮನೆಗೆ ಊಟಕ್ಕೆಂದು ತೆರಳಿ ವಾಪಸ್ ಬರುವಾಗ ನಗರದ ಹೊರವಲಯ ಹಾಳಗೆರೆ ಜಂಕ್ಷನ್ ಬಳಿ ಎದುರಿನಿಂದ ಬಂದ ಸ್ಯಾಂಟ್ರೋ ಕಾರು ಡಿಕ್ಕಿ ಹೊಡೆದ ಪರಿಣಾಮ ರವಿರವರ ತಲೆಗೆ ತೀವ್ರ ಪೆಟ್ಟಾಗಿ, ಹುಣಸೂರಿನ ಸಾರ್ವಜನಿಕ ಅಸ್ಪತ್ರೆಗೆ ಸೇರಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಅಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ತಾಲ್ಲೂಕು ಕಚೇರಿ ಪಕ್ಕದಲ್ಲಿರುವ ಸ್ಮಶಾನದಲ್ಲಿ ಸಂಜೆ ೫ ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು. ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಶಾಸಕ ಜಿ.ಡಿ.ಹರೀಶ್ಗೌಡ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮತ್ತಿತರರು ಸಾಂತ್ವನ ಹೇಳಿದ್ದಾರೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…