Mysore
30
overcast clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ಹುಣಸೂರು | ಚಿಕ್ಕಪ್ಪನಿಂದಲೇ ಮಗುವಿನ ಮೇಲೆ ಹಲ್ಲೆ

ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4  ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಆನಂದ್‌ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್‌ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.

Tags:
error: Content is protected !!