ಮೈಸೂರು

ಹುಣಸೂರು | ಚಿಕ್ಕಪ್ಪನಿಂದಲೇ ಮಗುವಿನ ಮೇಲೆ ಹಲ್ಲೆ

ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4  ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಆನಂದ್‌ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್‌ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌…

2 mins ago

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌…

36 mins ago

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

1 hour ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

2 hours ago

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

2 hours ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

2 hours ago