ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4 ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಆನಂದ್ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…