ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4 ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಆನಂದ್ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…