ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4 ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಆನಂದ್ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…