Mysore
22
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಹುಣಸೂರು | ಸಾಲಭಾಧೆಗೆ ರೈತ ಆತ್ಮಹತ್ಯೆ

ಹುಣಸೂರು: ತಾಲ್ಲೂಕಿನ ಮುದಗನೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

ಗ್ರಾಮದ ಸೋಮಶೇಖರ್ (೫೫) ಆತ್ಮಹತ್ಯೆ ಮಾಡಿಕೊಂಡ ರೈತ.
ಇವರು ಬೆಳೆ ಸಾಲ ಸೇರಿದಂತೆ ಇತರೆ ಹಲವು ಕಡೆ ೧೫ ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ವರ್ಷದಿಂದ ವರ್ಷಕ್ಕೆ ಸಾಲದ ಬಡ್ಡಿ ಹೆಚ್ಚಾಗುತ್ತಿತ್ತು. ಮತ್ತೊಂದೆಡೆ ತಮ್ಮ ಜಮೀನಿನಲ್ಲಿ ಸಾಲ ಮಾಡಿ ಬೆಳೆದಿದ್ದ ಬೆಳೆಗಳು ಸರಿಯಾಗಿ ಬಾರದೆ ನಷ್ಟ ಹೊಂದಿದ್ದರು. ಇದರಿಂದ ಮನನೊಂದು ಸೋಮವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!