ಮೈಸೂರು

ಹುಣಸೂರು| ಗ್ಯಾಸ್‌ ಸೋರಿಕೆ ಅವಘಡ: ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವು

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಳೆದ ಐದು ದಿನಗಳ ಹಿಂದೆ ಸಂಭವಿಸಿದ್ದ ಗ್ಯಾಸ್‌ ಸೋರಿಕೆ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತಿಗೆ ಚಿಕಿತ್ಸೆ ಮುಂದುವರಿದಿದೆ.

ಶೋಭಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಪತಿ ಕುಮಾರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇದೇ ಅಕ್ಟೋಬರ್.‌23ರಂದು ಹುಣಸೂರು ಪಟ್ಟಣದ ತಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್‌ ಸೋರಿಕೆಯಾಗಿ ದುರಂತ ಸಂಭವಿಸಿತ್ತು.

ಸೋರಿಕೆಯಾದ ಅನಿಲದಿಂದ ಏಕಾಏಕಿ ಬೆಂಕಿ ಆವರಿಸಿತ್ತು. ಪರಿಣಾಮ ಶೋಭಾಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಪತ್ನಿಯ ರಕ್ಷಣೆಗೆ ಧಾವಿಸಿದ್ದ ಪತಿ ಕುಮಾರ್‌ಗೂ ಕೂಡ ಗಂಭೀರ ಗಾಯಗಳಾಗಿದ್ದವು.

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶೋಭಾ ಮೃತಪಟ್ಟಿದ್ದಾರೆ. ಪತಿ ಕುಮಾರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಈ ಸಂಬಂಧ ಹುಣಸೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

3 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

4 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

55 mins ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

1 hour ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

2 hours ago