ಹುಣಸೂರು : ನಗರದ ಬೈಪಾಸ್ನಲ್ಲಿ ನಿರ್ಮಾಣ ಹಂತದಲ್ಲಿರುವ ೧೦೦ ಹಾಸಿಗೆ ಸಾಮರ್ಥ್ಯದ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆ ಆವರಣದಲ್ಲಿ ಅಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಳೆದ ಅಽವೇಶನದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಹೆಚ್ಚುವರಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿದ್ದರ ಪರಿಣಾಮ ಸರ್ಕಾರದಿಂದ ೯.೫ ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮುಂದಿನ ೮ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಶೀಘ್ರವೇ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು. ಹೆಚ್ಚುವರಿ ಅನುದಾನದ ಸಹಾಯದಿಂದ ಬಾಕಿ ಉಳಿದಿರುವ ಕಾಮಗಾರಿಗಳಾದ ಶವಾಗಾರ, ಎಸ್ಟಿಪಿ, ಇಟಿಪಿ, ನಾಲ್ಕು ಲಿಫ್ಟ್ಗಳ ಅಳವಡಿಕೆ ಮಾಡಲಾಗುವುದು ಎಂದರು.
ಡ್ರೈನೇಜ್, ಕಾಂಪೌಂಡ್, ನೆಟ್ವರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಸಿಸಿ ಕ್ಯಾಮರಾ ಅಳವಡಿಕೆ ಮುಂತಾದ ಕಾಮಗಾರಿಗಳು ನಡೆಯಲಿವೆ ಎಂದರು.
ಹಳೆಯ ಆಸ್ಪತ್ರೆಯನ್ನು ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನೂತನ ಕಟ್ಟಡದಲ್ಲಿ ವೈದ್ಯರ ಕೊರತೆ, ಸಿಬ್ಬಂದಿ ಇವೆಲ್ಲವುಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ೨೦೨೬ರ ಮಧ್ಯಭಾಗದಲ್ಲಿ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಆಶಯ ಹೊಂದಿದ್ದೇನೆ ಎಂದರು.
ಇಇ ಜಗದೀಶ್, ನಾಗರಾಜ್, ಸತೀಶ್ ಪಾಪಣ್ಣ, ನಗರಸಭಾಧ್ಯಕ್ಷ ಮಾಲಿಕ್ ಪಾಷ, ಮಾಜಿ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ವೈದ್ಯಾಧಿಕಾರಿ ಡಾ.ಮಹದೇವಸ್ವಾಮಿ, ಪ್ರಭಾರ ಟಿಎಚ್ಒ ಡಾ.ದರ್ಶನ್, ಪೌರಾಯುಕ್ತ ಕೆ.ಮಾನಸಾ, ಇತರರು ಹಾಜರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…