ಮೈಸೂರು

ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್‌ಗೌಡ

ಹುಣಸೂರು : ನಗರದ ಬೈಪಾಸ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ೧೦೦ ಹಾಸಿಗೆ ಸಾಮರ್ಥ್ಯದ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲಿಸಿದರು.

ಆಸ್ಪತ್ರೆ ಆವರಣದಲ್ಲಿ ಅಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಳೆದ ಅಽವೇಶನದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಹೆಚ್ಚುವರಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿದ್ದರ ಪರಿಣಾಮ ಸರ್ಕಾರದಿಂದ ೯.೫ ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮುಂದಿನ ೮ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಶೀಘ್ರವೇ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು. ಹೆಚ್ಚುವರಿ ಅನುದಾನದ ಸಹಾಯದಿಂದ ಬಾಕಿ ಉಳಿದಿರುವ ಕಾಮಗಾರಿಗಳಾದ ಶವಾಗಾರ, ಎಸ್‌ಟಿಪಿ, ಇಟಿಪಿ, ನಾಲ್ಕು ಲಿಫ್ಟ್‌ಗಳ ಅಳವಡಿಕೆ ಮಾಡಲಾಗುವುದು ಎಂದರು.

ಡ್ರೈನೇಜ್, ಕಾಂಪೌಂಡ್, ನೆಟ್‌ವರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಸಿಸಿ ಕ್ಯಾಮರಾ ಅಳವಡಿಕೆ ಮುಂತಾದ ಕಾಮಗಾರಿಗಳು ನಡೆಯಲಿವೆ ಎಂದರು.

ಹಳೆಯ ಆಸ್ಪತ್ರೆಯನ್ನು ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನೂತನ ಕಟ್ಟಡದಲ್ಲಿ ವೈದ್ಯರ ಕೊರತೆ, ಸಿಬ್ಬಂದಿ ಇವೆಲ್ಲವುಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ೨೦೨೬ರ ಮಧ್ಯಭಾಗದಲ್ಲಿ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಆಶಯ ಹೊಂದಿದ್ದೇನೆ ಎಂದರು.

ಇಇ ಜಗದೀಶ್, ನಾಗರಾಜ್, ಸತೀಶ್ ಪಾಪಣ್ಣ, ನಗರಸಭಾಧ್ಯಕ್ಷ ಮಾಲಿಕ್ ಪಾಷ, ಮಾಜಿ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ವೈದ್ಯಾಧಿಕಾರಿ ಡಾ.ಮಹದೇವಸ್ವಾಮಿ, ಪ್ರಭಾರ ಟಿಎಚ್‌ಒ ಡಾ.ದರ್ಶನ್, ಪೌರಾಯುಕ್ತ ಕೆ.ಮಾನಸಾ, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

2 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

8 hours ago