ಮೈಸೂರು

ಹುಣಸೂರು | ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

ಹನಗೋಡು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹನಗೋಡು ಬಳಿಯ ಸಿಂಡೇನಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಸಿಂಡೇನಹಳ್ಳಿ ಗ್ರಾಮದ ಶ್ರೀನಿವಾಸರ ಪತ್ನಿ ರೇಷ್ಮಾ(೨೫)ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಪತಿ ಶ್ರೀನಿವಾಸನನ್ನು ಬಂಧಿಸಲಾಗಿದೆ. ೬ ವರ್ಷಗಳ ಹಿಂದೆ ಹನಗೋಡಿಗೆ ಸಮೀಪದ ಈರತಯ್ಯನಕೊಪ್ಪಲಿನ ಚಂದ್ರೇಗೌಡರ ಪುತ್ರಿ ರೇಷ್ಮಾರನ್ನು ಶ್ರೀನಿವಾಸನಿಗೆ ವಿವಾಹ ಮಾಡಿಕೊಡಲಾಗಿತ್ತು. ಇತ್ತೀಚೆಗೆ ಗಂಡ-ಹೆಂಡತಿ ನಡುವೆ ವಿರಸ ಉಂಟಾಗಿ ಹಿರಿಯರು ಅನೇಕ ಬಾರಿ ನ್ಯಾಯ ಪಂಚಾಯಿತಿ ಮಾಡಿ ತಿಳಿಹೇಳಿ ಕಳುಹಿಸಿದ್ದರು. ಆದರೂ ಆಗಾಗ್ಗೆ ವರದಕ್ಷಿಣೆ ತರುವಂತೆ ಪತಿ ಶ್ರೀನಿವಾಸ್ ಪೀಡಿಸುತ್ತಾ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತ ಮಗಳು ಗಂಡನ ಮನೆಯಲ್ಲೇ ಮಾ.೧೧ರ ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳ ಸಾವಿಗೆ ಪತಿ ಶ್ರೀನಿವಾಸ, ಈತನ ಸಹೋದರ ಶ್ರೀಧರ್, ತಂದೆ-ತಾಯಿ ಮಾದೇಗೌಡ-ಸರಸಮ್ಮ ನವರೇ ಕಾರಣ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೇಷ್ಮಾರ ತಾಯಿ ಶಾಂತಮ್ಮ ದೂರು ದಾಖಲಿಸಿದ್ದಾರೆ.

ಇನ್ಸ್‌ಪೆಕ್ಟರ್ ಮುನಿಸ್ವಾಮಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶ್ರೀನಿವಾಸನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ.

ತಹಸಿಲ್ದಾರ್ ಎಂ.ಮಂಜುನಾಥ್ ಭೇಟಿ ನೀಡಿ ವಿಚಾರಣೆ ನಡೆಸಿದ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

28 mins ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

39 mins ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

52 mins ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

1 hour ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

1 hour ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

1 hour ago