ಹನಗೋಡು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹನಗೋಡು ಬಳಿಯ ಸಿಂಡೇನಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಸಿಂಡೇನಹಳ್ಳಿ ಗ್ರಾಮದ ಶ್ರೀನಿವಾಸರ ಪತ್ನಿ ರೇಷ್ಮಾ(೨೫)ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಪತಿ ಶ್ರೀನಿವಾಸನನ್ನು ಬಂಧಿಸಲಾಗಿದೆ. ೬ ವರ್ಷಗಳ ಹಿಂದೆ ಹನಗೋಡಿಗೆ ಸಮೀಪದ ಈರತಯ್ಯನಕೊಪ್ಪಲಿನ ಚಂದ್ರೇಗೌಡರ ಪುತ್ರಿ ರೇಷ್ಮಾರನ್ನು ಶ್ರೀನಿವಾಸನಿಗೆ ವಿವಾಹ ಮಾಡಿಕೊಡಲಾಗಿತ್ತು. ಇತ್ತೀಚೆಗೆ ಗಂಡ-ಹೆಂಡತಿ ನಡುವೆ ವಿರಸ ಉಂಟಾಗಿ ಹಿರಿಯರು ಅನೇಕ ಬಾರಿ ನ್ಯಾಯ ಪಂಚಾಯಿತಿ ಮಾಡಿ ತಿಳಿಹೇಳಿ ಕಳುಹಿಸಿದ್ದರು. ಆದರೂ ಆಗಾಗ್ಗೆ ವರದಕ್ಷಿಣೆ ತರುವಂತೆ ಪತಿ ಶ್ರೀನಿವಾಸ್ ಪೀಡಿಸುತ್ತಾ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತ ಮಗಳು ಗಂಡನ ಮನೆಯಲ್ಲೇ ಮಾ.೧೧ರ ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಗಳ ಸಾವಿಗೆ ಪತಿ ಶ್ರೀನಿವಾಸ, ಈತನ ಸಹೋದರ ಶ್ರೀಧರ್, ತಂದೆ-ತಾಯಿ ಮಾದೇಗೌಡ-ಸರಸಮ್ಮ ನವರೇ ಕಾರಣ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೇಷ್ಮಾರ ತಾಯಿ ಶಾಂತಮ್ಮ ದೂರು ದಾಖಲಿಸಿದ್ದಾರೆ.
ಇನ್ಸ್ಪೆಕ್ಟರ್ ಮುನಿಸ್ವಾಮಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶ್ರೀನಿವಾಸನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ.
ತಹಸಿಲ್ದಾರ್ ಎಂ.ಮಂಜುನಾಥ್ ಭೇಟಿ ನೀಡಿ ವಿಚಾರಣೆ ನಡೆಸಿದ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…