ಹನಗೋಡು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹನಗೋಡು ಬಳಿಯ ಸಿಂಡೇನಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಸಿಂಡೇನಹಳ್ಳಿ ಗ್ರಾಮದ ಶ್ರೀನಿವಾಸರ ಪತ್ನಿ ರೇಷ್ಮಾ(೨೫)ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಪತಿ ಶ್ರೀನಿವಾಸನನ್ನು ಬಂಧಿಸಲಾಗಿದೆ. ೬ ವರ್ಷಗಳ ಹಿಂದೆ ಹನಗೋಡಿಗೆ ಸಮೀಪದ ಈರತಯ್ಯನಕೊಪ್ಪಲಿನ ಚಂದ್ರೇಗೌಡರ ಪುತ್ರಿ ರೇಷ್ಮಾರನ್ನು ಶ್ರೀನಿವಾಸನಿಗೆ ವಿವಾಹ ಮಾಡಿಕೊಡಲಾಗಿತ್ತು. ಇತ್ತೀಚೆಗೆ ಗಂಡ-ಹೆಂಡತಿ ನಡುವೆ ವಿರಸ ಉಂಟಾಗಿ ಹಿರಿಯರು ಅನೇಕ ಬಾರಿ ನ್ಯಾಯ ಪಂಚಾಯಿತಿ ಮಾಡಿ ತಿಳಿಹೇಳಿ ಕಳುಹಿಸಿದ್ದರು. ಆದರೂ ಆಗಾಗ್ಗೆ ವರದಕ್ಷಿಣೆ ತರುವಂತೆ ಪತಿ ಶ್ರೀನಿವಾಸ್ ಪೀಡಿಸುತ್ತಾ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತ ಮಗಳು ಗಂಡನ ಮನೆಯಲ್ಲೇ ಮಾ.೧೧ರ ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಗಳ ಸಾವಿಗೆ ಪತಿ ಶ್ರೀನಿವಾಸ, ಈತನ ಸಹೋದರ ಶ್ರೀಧರ್, ತಂದೆ-ತಾಯಿ ಮಾದೇಗೌಡ-ಸರಸಮ್ಮ ನವರೇ ಕಾರಣ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೇಷ್ಮಾರ ತಾಯಿ ಶಾಂತಮ್ಮ ದೂರು ದಾಖಲಿಸಿದ್ದಾರೆ.
ಇನ್ಸ್ಪೆಕ್ಟರ್ ಮುನಿಸ್ವಾಮಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶ್ರೀನಿವಾಸನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ.
ತಹಸಿಲ್ದಾರ್ ಎಂ.ಮಂಜುನಾಥ್ ಭೇಟಿ ನೀಡಿ ವಿಚಾರಣೆ ನಡೆಸಿದ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…