ಹುಣಸೂರು: ಹುಡಾ(ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರ)ದ ನೂತನ ಅಧ್ಯಕ್ಷರಾಗಿ ಎಚ್.ಪಿ.ಅಮರ್ನಾಥ್ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ತಮ್ಮ ಆಡಳಿತ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ, ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್ಸೈಟ್ ಆರಂಬಿಸಲಾಗುವುದು ಎಂದು ಹೇಳಿದರು.
ಹುಡಾ ಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ನಗರದಲ್ಲಿ ನೂರಾಕ್ಕೂ ಹೆಚ್ಚು ಸಿ ಎ ಸೈಟ್ ಗಳಿದ್ದು ಬೇಡಿಕೆ ಆಧರಿಸಿ ಆದ್ಯತೆ ಮೇರೆಗೆ ಸಂಘ ಸಂಸ್ಥೆಗಳಿಗೆ ನೀಡಲು ಕ್ರಮ ವಹಿಸಲಾಗುವುದು. ಅನಧಿಕೃತ ಬಡಾವಣೆಗಳನ್ನು ಸರ್ಕಾರದ ನಿರ್ದೇಶನದ ಮೇರೆಗೆ ಎ ಖಾತಾ ಮತ್ತು ಬಿ ಖಾತಾ ಯೋಜನೆಯು ಈ ವಾರದೊಳಗೆ ಜಾರಿಗೊಳಿಸುವೆ ಎಂದು ಭರವಸೆ ನೀಡಿದರು.
ನಗರದ 84 ಅನಧಿಕೃತ ಬಡಾವಣೆಗಳ ಸಮಸ್ಯೆಯನ್ನು ಬಗೆಹರಿಸಲು ಶಾಸಕರು ಹಾಗೂ ನಗರ ಸಭೆ ಆಡಳಿತ ಮಂಡಳಿಯವರೊಂದಿಗೆ ಕೈಜೋಡಿಸಿ ಹುಣಸೂರು ನಗರವನ್ನು ಅಭಿವೃದ್ಧಿ ಪಡಿಸಲು ಶ್ರಮಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತನ್ನನ್ನು ಹುಡಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಿಎಂ ಸಿದ್ದ ರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರುಗಳಾದ ಸತೀಸ್ ಜಾರಕಿಹೋಳಿ, ಭೈರತಿ ಸುರೇಶ್, ಡಾ ಎಚ್ ಸಿ ಮಹದೇವಪ್ಪ, ಕೆ ವೆಂಕಟೇಶ್, ಮಾಜಿ ಶಾಸಕರಾದ ಎಚ್ ಪಿ ಮಂಜುನಾಥ್ ಗೆ ಅಭಿನಂದನೆ ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…