ಹುಣಸೂರು: ಹುಡಾ(ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರ)ದ ನೂತನ ಅಧ್ಯಕ್ಷರಾಗಿ ಎಚ್.ಪಿ.ಅಮರ್ನಾಥ್ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ತಮ್ಮ ಆಡಳಿತ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ, ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್ಸೈಟ್ ಆರಂಬಿಸಲಾಗುವುದು ಎಂದು ಹೇಳಿದರು.
ಹುಡಾ ಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ನಗರದಲ್ಲಿ ನೂರಾಕ್ಕೂ ಹೆಚ್ಚು ಸಿ ಎ ಸೈಟ್ ಗಳಿದ್ದು ಬೇಡಿಕೆ ಆಧರಿಸಿ ಆದ್ಯತೆ ಮೇರೆಗೆ ಸಂಘ ಸಂಸ್ಥೆಗಳಿಗೆ ನೀಡಲು ಕ್ರಮ ವಹಿಸಲಾಗುವುದು. ಅನಧಿಕೃತ ಬಡಾವಣೆಗಳನ್ನು ಸರ್ಕಾರದ ನಿರ್ದೇಶನದ ಮೇರೆಗೆ ಎ ಖಾತಾ ಮತ್ತು ಬಿ ಖಾತಾ ಯೋಜನೆಯು ಈ ವಾರದೊಳಗೆ ಜಾರಿಗೊಳಿಸುವೆ ಎಂದು ಭರವಸೆ ನೀಡಿದರು.
ನಗರದ 84 ಅನಧಿಕೃತ ಬಡಾವಣೆಗಳ ಸಮಸ್ಯೆಯನ್ನು ಬಗೆಹರಿಸಲು ಶಾಸಕರು ಹಾಗೂ ನಗರ ಸಭೆ ಆಡಳಿತ ಮಂಡಳಿಯವರೊಂದಿಗೆ ಕೈಜೋಡಿಸಿ ಹುಣಸೂರು ನಗರವನ್ನು ಅಭಿವೃದ್ಧಿ ಪಡಿಸಲು ಶ್ರಮಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತನ್ನನ್ನು ಹುಡಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಿಎಂ ಸಿದ್ದ ರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರುಗಳಾದ ಸತೀಸ್ ಜಾರಕಿಹೋಳಿ, ಭೈರತಿ ಸುರೇಶ್, ಡಾ ಎಚ್ ಸಿ ಮಹದೇವಪ್ಪ, ಕೆ ವೆಂಕಟೇಶ್, ಮಾಜಿ ಶಾಸಕರಾದ ಎಚ್ ಪಿ ಮಂಜುನಾಥ್ ಗೆ ಅಭಿನಂದನೆ ತಿಳಿಸಿದರು.
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…