ಮೈಸೂರು

ಹುಣಸೂರು| ಜೋಳದ ಹೊಲದಲ್ಲಿ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ

ಮೈಸೂರು: ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಜೋಳದ ಹೊಲದಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಿಸಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ.

ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಕಾಡಂಚಿನ ಪ್ರದೇಶದಲ್ಲಿರುವ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಗ್ರಾಮದ ಮುನಿಕುಮಾರ್‌ ಎಂಬುವವರ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ಕೂಡಲೇ ಮುನಿಕುಮಾರ್ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ವೀರನಹೊಸಹಳ್ಳಿ ವನ್ಯಜೀವಿ ವಲಯದ ಸಿಬ್ಬಂದಿ, ಸುರಕ್ಷಿತವಾಗಿ ಹೆಬ್ಬಾವನ್ನು ಬಲೆಯಲ್ಲಿ ಬಂಧಿಸಿ ನಾಗರಹೊಳೆ ಉದ್ಯಾನವನಕ್ಕೆ ಸಾಗಿಸಿದರು. ಇಲ್ಲಿವರೆಗೂ ಈ ಭಾಗದಲ್ಲಿ ಇಷ್ಟೊಂದು ಬೃಹತ್ ಗಾತ್ರದ ಹಾವು ಕಂಡಿರಲಿಲ್ಲ. ಹನ್ನೆರಡೂವರೆ ಅಡಿ ಉದ್ದ, 50 ಕೆ.ಜಿ ತೂಕದ ಸುಮಾರು 8-10 ವರ್ಷ ಪ್ರಾಯದ ಈ ಹೆಣ್ಣು ಹೆಬ್ಬಾವು ಆರೋಗ್ಯಯುತವಾಗಿದೆ ಎಂದು ವೀರನಹೊಸಹಳ್ಳಿ ಆರ್‌ಎಫ್‌ಒ ವಿನೋದ್‌ ಗೌಡ ಅವರು ಮಾಹಿತಿ ‌ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago