ಮೈಸೂರು: ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಜೋಳದ ಹೊಲದಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಿಸಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ.
ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಕಾಡಂಚಿನ ಪ್ರದೇಶದಲ್ಲಿರುವ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಗ್ರಾಮದ ಮುನಿಕುಮಾರ್ ಎಂಬುವವರ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ಕೂಡಲೇ ಮುನಿಕುಮಾರ್ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ವೀರನಹೊಸಹಳ್ಳಿ ವನ್ಯಜೀವಿ ವಲಯದ ಸಿಬ್ಬಂದಿ, ಸುರಕ್ಷಿತವಾಗಿ ಹೆಬ್ಬಾವನ್ನು ಬಲೆಯಲ್ಲಿ ಬಂಧಿಸಿ ನಾಗರಹೊಳೆ ಉದ್ಯಾನವನಕ್ಕೆ ಸಾಗಿಸಿದರು. ಇಲ್ಲಿವರೆಗೂ ಈ ಭಾಗದಲ್ಲಿ ಇಷ್ಟೊಂದು ಬೃಹತ್ ಗಾತ್ರದ ಹಾವು ಕಂಡಿರಲಿಲ್ಲ. ಹನ್ನೆರಡೂವರೆ ಅಡಿ ಉದ್ದ, 50 ಕೆ.ಜಿ ತೂಕದ ಸುಮಾರು 8-10 ವರ್ಷ ಪ್ರಾಯದ ಈ ಹೆಣ್ಣು ಹೆಬ್ಬಾವು ಆರೋಗ್ಯಯುತವಾಗಿದೆ ಎಂದು ವೀರನಹೊಸಹಳ್ಳಿ ಆರ್ಎಫ್ಒ ವಿನೋದ್ ಗೌಡ ಅವರು ಮಾಹಿತಿ ನೀಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…