ಹುಣಸೂರು : ತಾಲೂಕಿನ ಸರಕಾರಿ ಶಾಲೆಯಲ್ಲಿ ಬಾಲಕಿಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು, ಮಹಿಳೆಯರು ಹಿಡಿದು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ತಾಲೂಕಿನ ದೊಡ್ಡಹೆಜ್ಜೂರಿನ ವಿವಾಹಿತ ರವಿ(೪೨) ಎಂಬಾತನೇ ಬಂಧಿತ ಆರೋಪಿ. ಈತ ಇದೇ ಶಾಲೆಯಲ್ಲಿ ಹಿಂದೆ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ, ಕೆಲಸ ಬಿಟ್ಟ ನಂತರ ಗ್ರಾಮದಲ್ಲೇ ಗ್ರಾಮ-ಒನ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಶನಿವಾರ ಮದ್ಯಾಹ್ನದ ನಂತರ ೯ನೇ ತರಗತಿಯ ವಿದ್ಯಾರ್ಥಿನಿಯನ್ನು ಹಿರಿಯ ಪ್ರಾಥಮಿಕ ಶಾಲೆಗೆ ಕರೆಸಿಕೊಂಡು ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗಲೇ ಬಾಲಕಿಯ ಸಹೋದರ ಹಾಗೂ ಗ್ರಾಮಸ್ಥರು ಪತ್ತೆ ಹಚ್ಚಿ, ಗೂಸಾ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ ಮೇಗೆರೆ ಇನ್ಸ್ಪೆಕ್ಟರ್ ಮುನಿಸ್ವಾಮಿ ವಶಕ್ಕೆ ಪಡೆದರು.
ಈ ಸಂಬಂಧ ಬಾಲಕಿಯ ತಾಯಿ ಹಾಗೂ ಬಿಇಒ ಅವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಶಾಲೆಗೆ ಪೊಲೀಸ್ ಇನ್ಸ್ಪೆಕ್ಟರ್ ಮುನಿಸ್ವಾಮಿ, ಬಿಇಒ ಮಹದೇವ್ ಎಸ್.ಪಿ. ಹಾಗೂ ಸಿ.ಆರ್.ಪಿ, ಬಿಆರ್ಪಿಗಳು ಭೇಟಿ ನೀಡಿದ್ದರು.
ಮುಖ್ಯ ಶಿಕ್ಷಕನ ವಿರುದ್ದ ದೂರು:
ಶಾಲೆಯ ಬೀಗದ ಕೀ ರವಿ ಬಳಿ ಹೇಗೆ ಹೋಯಿತು. ಇಲ್ಲಿ ಮುಖ್ಯ ಶಿಕ್ಷಕ ಬಿ.ಎಂ.ಸತೀಶ್ಕುಮಾರ್ರ ಕರ್ತವ್ಯ ನಿರ್ಲಕ್ಷವಿದ್ದು, ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲಾ, ಹೀಗಾಗಿ ಮುಖ್ಯ ಶಿಕ್ಷಕರ ಬೇಜವಾಬ್ದಾರಿತನ ಹಾಗೂ ಅವರು ತಲೆಮರೆಸಿಕೊಂಡಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಬಿಇಒ ಮಹದೇವ್ ಎಸ್.ಪಿ ತಿಳಿಸಿದ್ದಾರೆ.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…