ಮೈಸೂರು

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ ಕೇರಳ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹೈರಿಗೆ, ತಟ್ಟೆಕೆರೆ, ಹೆಮ್ಮಿಗೆ ಹಾಗೂ ಬೀರನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ರೈತರು ದೊಡ್ಡ ಸಂಖ್ಯೆಯಲ್ಲಿ ಹೆದ್ದಾರಿಗಳಲ್ಲಿ ಇಂದು ಟೈರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೇರಳ ಹೆದ್ದಾರಿ ಹಲವು ಗಂಟೆಗಳ ಕಾಲ ಬಂದ್ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಇದನ್ನು ಓದಿ: ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ರೈತರ ಆರೋಪ ಪ್ರಕಾರ, ಕಳೆದ ಒಂದು ವರ್ಷದಿಂದ ಈ ಪ್ರದೇಶದಲ್ಲಿ ಹುಲಿ ದಾಳಿಗಳು ನಿರಂತರವಾಗಿದ್ದು, ಐವತ್ತಕ್ಕೂ ಹೆಚ್ಚು ಜಾನುವಾರುಗಳು ಬಲಿಯಾಗಿವೆ. ಹಗಲೆಲ್ಲೇ ಹುಲಿಗಳು ಗ್ರಾಮಗಳಲ್ಲಿ ತಿರುಗಾಡುತ್ತಿದ್ದು, ಜಾನುವಾರುಗಳನ್ನು ಮೇಯಿಸಲು ಬಿಡುವುದು ಅಪಾಯವಾಗಿದೆ ಎನ್ನಲಾಗಿದೆ.

ಇದೀಗ ಜೋಳ ಸೇರಿದಂತೆ ಧಾನ್ಯಗಳ ಕಟಾವು ಸಮಯವಾಗಿದ್ದು, ಕೂಲಿ ಕಾರ್ಮಿಕರು ಕೆಲಸಕ್ಕೆ ಬರಲು ಹೆದರಿರುವುದು, ರೈತರ ಕೆಲಸಕ್ಕೆ ಅಡಚಣೆ ಉಂಟುಮಾಡಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳನ್ನೂ ಸುರಕ್ಷಿತವಾಗಿ ವಾಪಸ್ಸು ಬರುವವರೆಗೆ ಕಾಯಬೇಕಿರುವ ಪರಿಸ್ಥಿತಿ ಗ್ರಾಮಗಳಲ್ಲಿ ನಿರ್ಮಾಣವಾಗಿದೆ ಎಂದು ರೈತರು ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದೆ ವೇಳೆ ಮಾನವ–ಜಾನುವಾರುಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕು
ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago