ಮೈಸೂರು

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ ಭಾನುವಾರ ಮಟ ಮಟ ಮಧ್ಯಾಹ್ನವೇ ನಡೆದ ಚಿನ್ನಾಭರಣ ದರೋಡೆ ಪ್ರಕರಣ ಹುಣಸೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಿದ್ದಾರೆ.

ಈ ಇನ್ನೂ ತನಿಖೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಷ್ಣುವರ್ಧನ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಕೋರರ ಚಹರೆಗಳನ್ನು ಗುರುತಿಸಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 7 ಕೆ.ಜಿ. ಚಿನ್ನಾಭರಣ ದರೋಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಂಗಡಿ ಮಾಲೀಕರ ಪಾತ್ರ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಘಟನೆ ನಡೆದು ಈಗಾಗಲೇ 24 ಗಂಟೆಗಳಾಗಿದ್ದು, ತನಿಖೆ ಚುರುಕಾಗಿ ಸಾಗುತ್ತಿದೆ. ಆರೋಪಿಗಳ ಬಂಧನಕ್ಕಾಗಿ ಐದು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ವಿವಿಧ ದಿಕ್ಕುಗಳಲ್ಲಿ ತನಿಖೆ ನಡೆಸುತ್ತಿವೆ ಎಂದಿದ್ದಾರೆ.

ಜ್ಯುಯಲರಿ ಅಂಗಡಿಯಲ್ಲಿ ಬೆಳಗಿನ ಸಮಯದಲ್ಲಿ ಸೆಕ್ಯೂರಿಟಿ ವ್ಯವಸ್ಥೆ ಇರಬೇಕಾಗಿತ್ತು, ಆದರೆ ಇಲ್ಲಿ ಆ ವ್ಯವಸ್ಥೆ ಇರಲಿಲ್ಲ. ರಾತ್ರಿಯ ವೇಳೆಗೆ ಮಾತ್ರ ಸೆಕ್ಯೂರಿಟಿ ಇಡಲಾಗಿರುವುದು ಹಾಗೂ ಸಾರ್ವಜನಿಕ ಹಾಗೂ ಗ್ರಾಹಕರ ಸುರಕ್ಷತೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದು ಸಹ ತನಿಖೆಯ ಭಾಗವಾಗಿದೆ ಎಂದು ತಿಳಿಸಿದ್ದಾರೆ.

ಕೆಲವು ಪ್ರಮುಖ ತನಿಖಾ ಆಯಾಮಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಆದಷ್ಟು ಬೇಗ ಆರೋಪಿಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದು ಭರವಸೆ ನೀಡಿದರು.

ಇದಲ್ಲದೆ, ಕಳೆದ ಆರು ತಿಂಗಳ ಹಿಂದೆ ಹುಣಸೂರಿನ ಎಲ್ಲಾ ಚಿನ್ನಾಭರಣ ಅಂಗಡಿ ಮಾಲೀಕರ ಸಭೆ ನಡೆಸಿ, ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಆ ಸೂಚನೆಗಳ ಅನುಷ್ಠಾನ ಕುರಿತು ಮರುಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

4 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

4 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

5 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

5 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

5 hours ago