ಹುಣಸೂರು : ತಾಲೂಕಿನ ಗಟಹಳ್ಳಿಯ ಕುಟುಂಬದ ಸಂಬಂಧಿಕರ ನಡುವೆ ಜಮೀನು ವಿವಾದ ವಿಚಾರವಾಗಿ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶಿಲ್ಪಾ (26) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಲ್ಪಾ ಅವರ ಸ್ಥಿತಿ ಗಂಭೀರವಾಗಿದೆ.
ಶಿಲ್ಪಾ ಪತಿ ಕೆಂಗಣ್ಣ ಅವರ ತಾಯಿ ನಾಗಮ್ಮ ಹೆಸರಲ್ಲಿ 1 ಎಕರೆ ಜಮೀನು ಇದೆ. ಕೆಂಗಣ್ಣನಿಗೆ ಓರ್ವ ಸಹೋದರ ಹಾಗೂ ಸಹೋದರಿ ಇದ್ದಾರೆ. ಜಮೀನು ವಿಚಾರವಾಗಿ ಇವರೆಲ್ಲರ ನಡುವೆ ಭಿನ್ನಭಿಪ್ರಾಯ ಉಂಟಾಗಿದೆ.
ಕೆಂಗಣ್ಣ ಸಹೋದರಿ ಸುಮ ತಾಯಿಯಿಂದ ಜಮೀನು ಬರೆಯಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೇಳಲು ಹೋಗಿದ್ದಾರೆ. ಈ ವೇಳೆ ಸುಮ, ಗವಿರಾಜು, ಮಲ್ಲ ಹಾಗೂ ಚಂದ್ರು ಪತ್ನಿ ಶಿಲ್ಪಾ ಮೇಲೆ ಮುಗಿಬಿದ್ದು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದರಿಂದ ಮನನೊಂದ ಶಿಲ್ಪಾ ಕ್ರಿಮಿನಾಶಕ ಸೇವಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ಶಿಲ್ಪಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ನನ್ನ ಪರಿಸ್ಥಿತಿಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…