ಮೈಸೂರು

ಹುಣಸೂರು: ಆರ್‌ಟಿಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ) ಮೇಲೆ ಇಂದು(ಜೂ.12) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಕಚೇರಿ ಆವರಣದಲ್ಲಿದ್ದ ಬ್ರೋಕರ್‌ಗಳು ಪರಾರಿಯಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಅನಧಿಕೃತವಾಗಿ ಸಾರ್ವಜನಿಕರ ದಾಖಲಾತಿ ಮಾಡಿಕೊಳ್ಳುತ್ತಿದ್ದ ಲ್ಯಾಪ್‌ಟಾಪ್‌, ಸ್ಕ್ಯಾನರ್‌, 1 ಸ್ಯಾಂಟ್ರೋ ಕಾರು, 3 ಓಮಿನಿ ವ್ಯಾನ್‌ಗಳು ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.

ದಾಳಿ ವೇಳೆ ಆರ್‌ಟಿಓ ಕಚೇರಿಯಲ್ಲಿರಬೇಕಾದ ಅಧಿಕೃತ ಸರ್ಕಾರಿ ದಾಖಲಾತಿಗಳು ಬ್ರೋಕರ್‌ಗಳ ಕಾರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದು, ಇದು ಆರ್‌ಟಿಓ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಭ್ರಷ್ಟಚಾರ ಮತ್ತು ಬ್ರೋಕರ್‌ಗಳ ಹಾವಳಿಯಿಂದ ಬೇಸತ್ತಿದ್ದ ಆರ್‌ಟಿಓ ಅಧಿಕಾರಿಗಳೇ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಹುಣಸೂರು ಆರ್‌ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ನಿರಂತರವಾಗಿದ್ದು, ಈ ಭ್ರಷ್ಟಚಾರಕ್ಕೆ ಆರ್‌ಟಿಓ ಅಧಿಕಾರಿಗಳೇ ಬೇಸತ್ತಿದ್ದಾರೆ. ಅಧಿಕಾರಿಗಳಿಗೆ ಈ ಸ್ಥಿತಿಯಾದರೆ ಇನ್ನೂ ಸಾರ್ವಜನಿಕರು ಎಷ್ಟು ಬೇಸತ್ತಿದ್ದಾರೆ ಎನ್ನುವುದು ಊಹೆಗೂ ಮೀರಿದ್ದಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

25 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

37 mins ago

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

1 hour ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

2 hours ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

2 hours ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

2 hours ago