ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ(ಆರ್ಟಿಓ) ಮೇಲೆ ಇಂದು(ಜೂ.12) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಕಚೇರಿ ಆವರಣದಲ್ಲಿದ್ದ ಬ್ರೋಕರ್ಗಳು ಪರಾರಿಯಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಅನಧಿಕೃತವಾಗಿ ಸಾರ್ವಜನಿಕರ ದಾಖಲಾತಿ ಮಾಡಿಕೊಳ್ಳುತ್ತಿದ್ದ ಲ್ಯಾಪ್ಟಾಪ್, ಸ್ಕ್ಯಾನರ್, 1 ಸ್ಯಾಂಟ್ರೋ ಕಾರು, 3 ಓಮಿನಿ ವ್ಯಾನ್ಗಳು ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಆರ್ಟಿಓ ಕಚೇರಿಯಲ್ಲಿರಬೇಕಾದ ಅಧಿಕೃತ ಸರ್ಕಾರಿ ದಾಖಲಾತಿಗಳು ಬ್ರೋಕರ್ಗಳ ಕಾರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದು, ಇದು ಆರ್ಟಿಓ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಭ್ರಷ್ಟಚಾರ ಮತ್ತು ಬ್ರೋಕರ್ಗಳ ಹಾವಳಿಯಿಂದ ಬೇಸತ್ತಿದ್ದ ಆರ್ಟಿಓ ಅಧಿಕಾರಿಗಳೇ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಹುಣಸೂರು ಆರ್ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ನಿರಂತರವಾಗಿದ್ದು, ಈ ಭ್ರಷ್ಟಚಾರಕ್ಕೆ ಆರ್ಟಿಓ ಅಧಿಕಾರಿಗಳೇ ಬೇಸತ್ತಿದ್ದಾರೆ. ಅಧಿಕಾರಿಗಳಿಗೆ ಈ ಸ್ಥಿತಿಯಾದರೆ ಇನ್ನೂ ಸಾರ್ವಜನಿಕರು ಎಷ್ಟು ಬೇಸತ್ತಿದ್ದಾರೆ ಎನ್ನುವುದು ಊಹೆಗೂ ಮೀರಿದ್ದಾಗಿದೆ.
ತುಮಕೂರು: ನಾಳೆ(ಏಪ್ರಿಲ್.1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…
ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…