ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ(ಆರ್ಟಿಓ) ಮೇಲೆ ಇಂದು(ಜೂ.12) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಕಚೇರಿ ಆವರಣದಲ್ಲಿದ್ದ ಬ್ರೋಕರ್ಗಳು ಪರಾರಿಯಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಅನಧಿಕೃತವಾಗಿ ಸಾರ್ವಜನಿಕರ ದಾಖಲಾತಿ ಮಾಡಿಕೊಳ್ಳುತ್ತಿದ್ದ ಲ್ಯಾಪ್ಟಾಪ್, ಸ್ಕ್ಯಾನರ್, 1 ಸ್ಯಾಂಟ್ರೋ ಕಾರು, 3 ಓಮಿನಿ ವ್ಯಾನ್ಗಳು ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಆರ್ಟಿಓ ಕಚೇರಿಯಲ್ಲಿರಬೇಕಾದ ಅಧಿಕೃತ ಸರ್ಕಾರಿ ದಾಖಲಾತಿಗಳು ಬ್ರೋಕರ್ಗಳ ಕಾರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದು, ಇದು ಆರ್ಟಿಓ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಭ್ರಷ್ಟಚಾರ ಮತ್ತು ಬ್ರೋಕರ್ಗಳ ಹಾವಳಿಯಿಂದ ಬೇಸತ್ತಿದ್ದ ಆರ್ಟಿಓ ಅಧಿಕಾರಿಗಳೇ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಹುಣಸೂರು ಆರ್ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ನಿರಂತರವಾಗಿದ್ದು, ಈ ಭ್ರಷ್ಟಚಾರಕ್ಕೆ ಆರ್ಟಿಓ ಅಧಿಕಾರಿಗಳೇ ಬೇಸತ್ತಿದ್ದಾರೆ. ಅಧಿಕಾರಿಗಳಿಗೆ ಈ ಸ್ಥಿತಿಯಾದರೆ ಇನ್ನೂ ಸಾರ್ವಜನಿಕರು ಎಷ್ಟು ಬೇಸತ್ತಿದ್ದಾರೆ ಎನ್ನುವುದು ಊಹೆಗೂ ಮೀರಿದ್ದಾಗಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…