ಹುಣಸೂರು : ನಾಪತ್ತೆಯಾಗಿದ್ದ ಹುಣಸೂರಿನ ಖ್ಯಾತ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ನಗರದ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶವ ಪತ್ತೆಯಾಗಿದೆ.
ಘಟನೆ ವಿವರ :
ನಿನ್ನೆ ಆಫೀಸ್ಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವಕೀಲ. ರಾತ್ರಿಯಾದರೂ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿ ಬಿಳಿಕೆರೆ ಪೊಲೀಸ್ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ದರು.
ಇದನ್ನೂ ಓದಿ:-Wi-Fi ಯೂಸರ್ ನೇಮ್ನಲ್ಲಿ ಪಾಕ್ ಜಿಂದಾಬಾದ್ : ಕ್ರಮಕ್ಕೆ ಸ್ಥಳೀಯರ ಆಗ್ರಹ
ಈ ನಡುವೆ ಗುರುವಾರ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯ ಲಕ್ಷ್ಮಣ ತೀರ್ಥ ನದಿ ಸೇತುವೆ ಬಳಿ ವಕೀಲನ ಕಾರು ಪತ್ತೆಯಾಗಿತ್ತು. ನದಿ ಬಳಿ ಕಾರು ಪತ್ತೆಯಾದ ಹಿನ್ನಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿತ್ತು.
ಬೆಳಗಿನಿಂದ ಹೊಸರಾಮನಹಳ್ಳಿಯ ಲಕ್ಷ್ಮಣ ತೀರ್ಥ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇದೀಗ ನದಿಯಲ್ಲಿ ವಕೀಲ ಕೆ.ರಾಜು ಶವವಾಗಿ ಪತ್ತೆಯಾಗಿದ್ದಾರೆ.
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…