ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ.
ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. ಈ ಭಾಗದಲ್ಲಿ ಈಗಾಗಲೇ ಹಿಂಗಾರು ಬೆಳೆ ಕಟಾವು ಮಾಡಿಕೊಂಡು ಶುಂಠಿ, ಬಾಳೆ, ಮರಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ನಾಟಿ ಮಾಡಿರುವ ರೈತರಿಗೆ ಮಳೆ ಸಹಾಯಕವಾಗಿದ್ದು ಸಂತಸ ಮೂಡಿಸಿದೆ.
ಆದರೆ ಇನ್ನೂ ಕೆಲ ರೈತರು ರಾಗಿ ಹಾಗೂ ಮುಸುಕಿನ ಜೋಳದ ಕಟಾವು ಮಾಡಿ ಒಕ್ಕಣೆ ಮಾಡದೆ ಹೊಲದಲ್ಲೇ ಇಟ್ಟುಕೊಂಡಿದ್ದ ಬೆಳೆಗೆ ಮಳೆ ನೀರು ತಗುಲಿ ಹಾನಿಯಾಗಿರುವುದು ಕಂಡುಬಂದಿದೆ. ಅಲ್ಲದೆ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಒಣಮೇವು ಸಹ ಮಳೆ ನೀರಿನಿಂದ ತೊಯ್ದು ಹಾನಿಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…