ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ.
ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. ಈ ಭಾಗದಲ್ಲಿ ಈಗಾಗಲೇ ಹಿಂಗಾರು ಬೆಳೆ ಕಟಾವು ಮಾಡಿಕೊಂಡು ಶುಂಠಿ, ಬಾಳೆ, ಮರಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ನಾಟಿ ಮಾಡಿರುವ ರೈತರಿಗೆ ಮಳೆ ಸಹಾಯಕವಾಗಿದ್ದು ಸಂತಸ ಮೂಡಿಸಿದೆ.
ಆದರೆ ಇನ್ನೂ ಕೆಲ ರೈತರು ರಾಗಿ ಹಾಗೂ ಮುಸುಕಿನ ಜೋಳದ ಕಟಾವು ಮಾಡಿ ಒಕ್ಕಣೆ ಮಾಡದೆ ಹೊಲದಲ್ಲೇ ಇಟ್ಟುಕೊಂಡಿದ್ದ ಬೆಳೆಗೆ ಮಳೆ ನೀರು ತಗುಲಿ ಹಾನಿಯಾಗಿರುವುದು ಕಂಡುಬಂದಿದೆ. ಅಲ್ಲದೆ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಒಣಮೇವು ಸಹ ಮಳೆ ನೀರಿನಿಂದ ತೊಯ್ದು ಹಾನಿಯಾಗಿದೆ.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…