ಮೈಸೂರು

ಹುಣಸೂರು | ತಂಬಾಕಿಗೆ ಉತ್ತಮ ಬೆಲೆ ಭರವಸೆ ನೀಡಿದ ಸಂಸದ ಯದುವೀರ್‌

ಹುಣಸೂರು : ತಂಬಾಕು ಬೆಳದ ರೈತರಿಗೆ ಉತ್ತಮ ಬೆಲೆ ಸಿಗುವುವವರೆಗೂ ಅವರೊಂದಿಗೆ ನಾ ಸದಾ ಇರುತ್ತೇನೆ ಎಂದು ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭರವಸೆ ನೀಡಿದರು.

ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಇ-ಬೆಡ್ ಮೂಲಕ ತಂಬಾಕು ಖರೀದಿಗೆ ಚಾಲನೆ ನೀಡಿ ಮಾತನಾಡಿ ಅವರು, ಕಳದ ವರ್ಷ ಆರಂಭಿಕ ಬೆಲೆ 290 ರು ಇತ್ತು ಈ ಭಾರಿ 320 ಬೆಲೆ ಸಿಗುವ ಮೂಲಕ ಆಶದಾಯಕವಾಗಿದ್ದು, ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಬೆಲೆ ಕೊಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಭಾಗಿಯಾಗುವೆ ಎಂದರು.

ಇದನ್ನೂ ಓದಿ: ಓದುಗರ ಪತ್ರ: ನ್ಯಾಯಾಲಯದ ಘನತೆ ಕಾಪಾಡಿ

ಆಂಧ್ರ, ಗುಂಟೂರಿನಲ್ಲಿ ಅಷ್ಟು ಬೆಲೆ ಇದೆ, ಇಷ್ಟು ಇದೆ ಎಂದು ಹೋಲಿಕೆ ಮಾಡಬೇಡಿ. ಅವರ ತಂಬಾಕಿಗೂ ನಮ್ಮ ತಂಬಾಕಿಗೂ ವ್ಯತ್ಯಾಸವಿದೆ. ನಮ್ಮ ತಂಬಾಕು ಕೂಡ ಉತ್ಕೃಷ್ಟವಾಗಿದ್ದು, ಸ್ವದೇಶಿ ವ್ಯವಸ್ಥೆಗೆ ನಾವು ಒತ್ತು ನೀಡಬೇಕಿದೆ. ನಮ್ಮ ತಂಬಾಕು ಖರೀದಿಗೆ ಐಟಿಸಿ ಸೇರಿದಂತೆ ಸುಮಾರು ಮೂವತ್ತು ಕಂಪನಿಗಳು ಬಂದಿದ್ದು ಗುಣಮಟ್ಟದ ನಮ್ಮ ತಂಬಾಕಿಗೆ ಉತ್ತಮ ಬೆಲೆ ಸಿಗಲಿದೆ ಎಂದರು.

ತಂಬಾಕು ಬೆಳೆಗಾರರಿಗೆ ತಲೆ ನೋವಾಗಿರುವ ಅಧಿಕೃತ ಮತ್ತು ಅನಧಿಕೃತ ರೈರಿಗೆ ಮುಕ್ತಿ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜತೆ ಚೆರ್ಚಿಸಿ ಅಧಿಕೃತ ತಂಬಾಕು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲು ನನ್ನ ಶತಪ್ರಯತ್ನ ಮಾಡಲಾಗುವುದು. ಅದೇ ರೀತಿ ರೈತರ ನಿಲುವೇ ನನ್ನ ನಿಲುವಾಗಿದ್ದು, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವಂತೆ ಹೋರಾಡುವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಉಂಡವಾಡಿ ಸಿ. ಚಂದ್ರೇಗೌಡ, ಅಧ್ಯಕ್ಷ. ಮೋದೂರು ಶಿವಣ್ಣ, ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಬಿ.ಎನ್. ನಾರಾಜಪ್ಪ, ರಮೇಶ್ ಕುಮಾರ್, ನಗರಸಭೆ ಸದಸ್ಯ ಗಣೇಶ್ ಕುಮಾರಸ್ವಾಮಿ, ನಾಗರಾಜ ಮಲ್ಲಾಡಿ, ಸತೀಶ್, ಚಂದ್ರಶೇಖರ್, ಸೂಪಡೆಂಟ್ಗಳಾದ ಸಿದ್ದರಾಜು, ಮೀನಾ, ಪ್ರಭಾಕರ್ ಇದ್ದರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

6 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

6 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

6 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

6 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

7 hours ago