ಹುಣಸೂರು : ತಂಬಾಕು ಬೆಳದ ರೈತರಿಗೆ ಉತ್ತಮ ಬೆಲೆ ಸಿಗುವುವವರೆಗೂ ಅವರೊಂದಿಗೆ ನಾ ಸದಾ ಇರುತ್ತೇನೆ ಎಂದು ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭರವಸೆ ನೀಡಿದರು.
ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಇ-ಬೆಡ್ ಮೂಲಕ ತಂಬಾಕು ಖರೀದಿಗೆ ಚಾಲನೆ ನೀಡಿ ಮಾತನಾಡಿ ಅವರು, ಕಳದ ವರ್ಷ ಆರಂಭಿಕ ಬೆಲೆ 290 ರು ಇತ್ತು ಈ ಭಾರಿ 320 ಬೆಲೆ ಸಿಗುವ ಮೂಲಕ ಆಶದಾಯಕವಾಗಿದ್ದು, ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಬೆಲೆ ಕೊಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಭಾಗಿಯಾಗುವೆ ಎಂದರು.
ಇದನ್ನೂ ಓದಿ: ಓದುಗರ ಪತ್ರ: ನ್ಯಾಯಾಲಯದ ಘನತೆ ಕಾಪಾಡಿ
ಆಂಧ್ರ, ಗುಂಟೂರಿನಲ್ಲಿ ಅಷ್ಟು ಬೆಲೆ ಇದೆ, ಇಷ್ಟು ಇದೆ ಎಂದು ಹೋಲಿಕೆ ಮಾಡಬೇಡಿ. ಅವರ ತಂಬಾಕಿಗೂ ನಮ್ಮ ತಂಬಾಕಿಗೂ ವ್ಯತ್ಯಾಸವಿದೆ. ನಮ್ಮ ತಂಬಾಕು ಕೂಡ ಉತ್ಕೃಷ್ಟವಾಗಿದ್ದು, ಸ್ವದೇಶಿ ವ್ಯವಸ್ಥೆಗೆ ನಾವು ಒತ್ತು ನೀಡಬೇಕಿದೆ. ನಮ್ಮ ತಂಬಾಕು ಖರೀದಿಗೆ ಐಟಿಸಿ ಸೇರಿದಂತೆ ಸುಮಾರು ಮೂವತ್ತು ಕಂಪನಿಗಳು ಬಂದಿದ್ದು ಗುಣಮಟ್ಟದ ನಮ್ಮ ತಂಬಾಕಿಗೆ ಉತ್ತಮ ಬೆಲೆ ಸಿಗಲಿದೆ ಎಂದರು.
ತಂಬಾಕು ಬೆಳೆಗಾರರಿಗೆ ತಲೆ ನೋವಾಗಿರುವ ಅಧಿಕೃತ ಮತ್ತು ಅನಧಿಕೃತ ರೈರಿಗೆ ಮುಕ್ತಿ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜತೆ ಚೆರ್ಚಿಸಿ ಅಧಿಕೃತ ತಂಬಾಕು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲು ನನ್ನ ಶತಪ್ರಯತ್ನ ಮಾಡಲಾಗುವುದು. ಅದೇ ರೀತಿ ರೈತರ ನಿಲುವೇ ನನ್ನ ನಿಲುವಾಗಿದ್ದು, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವಂತೆ ಹೋರಾಡುವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಉಂಡವಾಡಿ ಸಿ. ಚಂದ್ರೇಗೌಡ, ಅಧ್ಯಕ್ಷ. ಮೋದೂರು ಶಿವಣ್ಣ, ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಬಿ.ಎನ್. ನಾರಾಜಪ್ಪ, ರಮೇಶ್ ಕುಮಾರ್, ನಗರಸಭೆ ಸದಸ್ಯ ಗಣೇಶ್ ಕುಮಾರಸ್ವಾಮಿ, ನಾಗರಾಜ ಮಲ್ಲಾಡಿ, ಸತೀಶ್, ಚಂದ್ರಶೇಖರ್, ಸೂಪಡೆಂಟ್ಗಳಾದ ಸಿದ್ದರಾಜು, ಮೀನಾ, ಪ್ರಭಾಕರ್ ಇದ್ದರು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…