ಮೈಸೂರು

ಹುಣಸೂರು | ತಂಬಾಕಿಗೆ ಉತ್ತಮ ಬೆಲೆ ಭರವಸೆ ನೀಡಿದ ಸಂಸದ ಯದುವೀರ್‌

ಹುಣಸೂರು : ತಂಬಾಕು ಬೆಳದ ರೈತರಿಗೆ ಉತ್ತಮ ಬೆಲೆ ಸಿಗುವುವವರೆಗೂ ಅವರೊಂದಿಗೆ ನಾ ಸದಾ ಇರುತ್ತೇನೆ ಎಂದು ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭರವಸೆ ನೀಡಿದರು.

ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಇ-ಬೆಡ್ ಮೂಲಕ ತಂಬಾಕು ಖರೀದಿಗೆ ಚಾಲನೆ ನೀಡಿ ಮಾತನಾಡಿ ಅವರು, ಕಳದ ವರ್ಷ ಆರಂಭಿಕ ಬೆಲೆ 290 ರು ಇತ್ತು ಈ ಭಾರಿ 320 ಬೆಲೆ ಸಿಗುವ ಮೂಲಕ ಆಶದಾಯಕವಾಗಿದ್ದು, ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಬೆಲೆ ಕೊಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಭಾಗಿಯಾಗುವೆ ಎಂದರು.

ಇದನ್ನೂ ಓದಿ: ಓದುಗರ ಪತ್ರ: ನ್ಯಾಯಾಲಯದ ಘನತೆ ಕಾಪಾಡಿ

ಆಂಧ್ರ, ಗುಂಟೂರಿನಲ್ಲಿ ಅಷ್ಟು ಬೆಲೆ ಇದೆ, ಇಷ್ಟು ಇದೆ ಎಂದು ಹೋಲಿಕೆ ಮಾಡಬೇಡಿ. ಅವರ ತಂಬಾಕಿಗೂ ನಮ್ಮ ತಂಬಾಕಿಗೂ ವ್ಯತ್ಯಾಸವಿದೆ. ನಮ್ಮ ತಂಬಾಕು ಕೂಡ ಉತ್ಕೃಷ್ಟವಾಗಿದ್ದು, ಸ್ವದೇಶಿ ವ್ಯವಸ್ಥೆಗೆ ನಾವು ಒತ್ತು ನೀಡಬೇಕಿದೆ. ನಮ್ಮ ತಂಬಾಕು ಖರೀದಿಗೆ ಐಟಿಸಿ ಸೇರಿದಂತೆ ಸುಮಾರು ಮೂವತ್ತು ಕಂಪನಿಗಳು ಬಂದಿದ್ದು ಗುಣಮಟ್ಟದ ನಮ್ಮ ತಂಬಾಕಿಗೆ ಉತ್ತಮ ಬೆಲೆ ಸಿಗಲಿದೆ ಎಂದರು.

ತಂಬಾಕು ಬೆಳೆಗಾರರಿಗೆ ತಲೆ ನೋವಾಗಿರುವ ಅಧಿಕೃತ ಮತ್ತು ಅನಧಿಕೃತ ರೈರಿಗೆ ಮುಕ್ತಿ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜತೆ ಚೆರ್ಚಿಸಿ ಅಧಿಕೃತ ತಂಬಾಕು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲು ನನ್ನ ಶತಪ್ರಯತ್ನ ಮಾಡಲಾಗುವುದು. ಅದೇ ರೀತಿ ರೈತರ ನಿಲುವೇ ನನ್ನ ನಿಲುವಾಗಿದ್ದು, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವಂತೆ ಹೋರಾಡುವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಉಂಡವಾಡಿ ಸಿ. ಚಂದ್ರೇಗೌಡ, ಅಧ್ಯಕ್ಷ. ಮೋದೂರು ಶಿವಣ್ಣ, ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಬಿ.ಎನ್. ನಾರಾಜಪ್ಪ, ರಮೇಶ್ ಕುಮಾರ್, ನಗರಸಭೆ ಸದಸ್ಯ ಗಣೇಶ್ ಕುಮಾರಸ್ವಾಮಿ, ನಾಗರಾಜ ಮಲ್ಲಾಡಿ, ಸತೀಶ್, ಚಂದ್ರಶೇಖರ್, ಸೂಪಡೆಂಟ್ಗಳಾದ ಸಿದ್ದರಾಜು, ಮೀನಾ, ಪ್ರಭಾಕರ್ ಇದ್ದರು

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

6 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

6 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

6 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

6 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

6 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

6 hours ago