ಹುಣಸೂರು : ತಂಬಾಕು ಬೆಳದ ರೈತರಿಗೆ ಉತ್ತಮ ಬೆಲೆ ಸಿಗುವುವವರೆಗೂ ಅವರೊಂದಿಗೆ ನಾ ಸದಾ ಇರುತ್ತೇನೆ ಎಂದು ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭರವಸೆ ನೀಡಿದರು.
ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಇ-ಬೆಡ್ ಮೂಲಕ ತಂಬಾಕು ಖರೀದಿಗೆ ಚಾಲನೆ ನೀಡಿ ಮಾತನಾಡಿ ಅವರು, ಕಳದ ವರ್ಷ ಆರಂಭಿಕ ಬೆಲೆ 290 ರು ಇತ್ತು ಈ ಭಾರಿ 320 ಬೆಲೆ ಸಿಗುವ ಮೂಲಕ ಆಶದಾಯಕವಾಗಿದ್ದು, ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಬೆಲೆ ಕೊಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಭಾಗಿಯಾಗುವೆ ಎಂದರು.
ಇದನ್ನೂ ಓದಿ: ಓದುಗರ ಪತ್ರ: ನ್ಯಾಯಾಲಯದ ಘನತೆ ಕಾಪಾಡಿ
ಆಂಧ್ರ, ಗುಂಟೂರಿನಲ್ಲಿ ಅಷ್ಟು ಬೆಲೆ ಇದೆ, ಇಷ್ಟು ಇದೆ ಎಂದು ಹೋಲಿಕೆ ಮಾಡಬೇಡಿ. ಅವರ ತಂಬಾಕಿಗೂ ನಮ್ಮ ತಂಬಾಕಿಗೂ ವ್ಯತ್ಯಾಸವಿದೆ. ನಮ್ಮ ತಂಬಾಕು ಕೂಡ ಉತ್ಕೃಷ್ಟವಾಗಿದ್ದು, ಸ್ವದೇಶಿ ವ್ಯವಸ್ಥೆಗೆ ನಾವು ಒತ್ತು ನೀಡಬೇಕಿದೆ. ನಮ್ಮ ತಂಬಾಕು ಖರೀದಿಗೆ ಐಟಿಸಿ ಸೇರಿದಂತೆ ಸುಮಾರು ಮೂವತ್ತು ಕಂಪನಿಗಳು ಬಂದಿದ್ದು ಗುಣಮಟ್ಟದ ನಮ್ಮ ತಂಬಾಕಿಗೆ ಉತ್ತಮ ಬೆಲೆ ಸಿಗಲಿದೆ ಎಂದರು.
ತಂಬಾಕು ಬೆಳೆಗಾರರಿಗೆ ತಲೆ ನೋವಾಗಿರುವ ಅಧಿಕೃತ ಮತ್ತು ಅನಧಿಕೃತ ರೈರಿಗೆ ಮುಕ್ತಿ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜತೆ ಚೆರ್ಚಿಸಿ ಅಧಿಕೃತ ತಂಬಾಕು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲು ನನ್ನ ಶತಪ್ರಯತ್ನ ಮಾಡಲಾಗುವುದು. ಅದೇ ರೀತಿ ರೈತರ ನಿಲುವೇ ನನ್ನ ನಿಲುವಾಗಿದ್ದು, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವಂತೆ ಹೋರಾಡುವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಉಂಡವಾಡಿ ಸಿ. ಚಂದ್ರೇಗೌಡ, ಅಧ್ಯಕ್ಷ. ಮೋದೂರು ಶಿವಣ್ಣ, ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಬಿ.ಎನ್. ನಾರಾಜಪ್ಪ, ರಮೇಶ್ ಕುಮಾರ್, ನಗರಸಭೆ ಸದಸ್ಯ ಗಣೇಶ್ ಕುಮಾರಸ್ವಾಮಿ, ನಾಗರಾಜ ಮಲ್ಲಾಡಿ, ಸತೀಶ್, ಚಂದ್ರಶೇಖರ್, ಸೂಪಡೆಂಟ್ಗಳಾದ ಸಿದ್ದರಾಜು, ಮೀನಾ, ಪ್ರಭಾಕರ್ ಇದ್ದರು
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…