ಮೈಸೂರು

ಹುಣಸೂರು ನಗರಸಭೆ | ದೂರುಗಳ ಸುರಿಮಳೆ ; ಪರಿಹಾರದ ಭರವಸೆ

ಹುಣಸೂರು: ನಗರಸಭೆ ಕಾರ್ಯಾಲಯದ ಕೌನ್ಸಿಲ್ ಸಾಮಾನ್ಯ ಸಭೆಯು ಬುಧವಾರ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು.

ನಗರಸಭಾಧ್ಯಕ್ಷ ಶರವಣ, ಶಾಸಕ ಹರೀಶ್ ಗೌಡ ರವರು ಹಾಜರಿದ್ದು, ತಾಳ್ಮೆಯಿಂದ ಸದಸ್ಯರ ಪ್ರಶ್ನೆಗಳನ್ನು ಆಲಿಸಿದರು. ಸಭೆ ಪ್ರಾರಂಭವಾಗುತ್ತಿದ್ದಂತೆ ಚರಂಡಿ ನೀರು ನದಿಗೆ ಸೇರಬಾರದೆಂದು ಲಕ್ಷಾಂತರ ರೂ. ಖರ್ಚು ಮಾಡಿದರೂ ನೀರಾವರಿ ನಿಗಮ ಹಾಗೂ ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದ ಹಲವು ಕಡೆ ತ್ಯಾಜ್ಯ ನೀರು ನದಿಗೆ ಸೇರುತ್ತಿದೆ. ದೂರು ನೀಡಿ ಒಂದು ವರ್ಷ ಕಳೆದರೂ ಪ್ರಯೋಜನವಾಗಿ ಎಂದು ನಗರಸಭಾ ಸದಸ್ಯ ಸಯ್ಯದ್ ಯೂನುಸ್ ದೂರಿದರು.

ಈ ಸಂಬಂಧ ಟೆಂಡರ್ ಕರೆದಿದ್ದು, ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ನಿಗಮ ಹಾಗೂ ನಗರಸಭಾ ಅಧಿಕಾರಿಗಳು ತಿಳಿಸಿದರು.

ನಗರಸಭಾ ಸದಸ್ಯ ದೇವರಾಜ್ ಮಾತನಾಡಿ, ನಗರದ ಕಲ್ಕುಣಿಕೆಯ ನಾಯಕರ ಸ್ಮಶಾನದ ರಸ್ತೆಯಲ್ಲಿ ಒಳ ಚರಂಡಿ ನೀರು ಹರಿಯುತ್ತಿದ್ದು
ಹಲವು ಬಾರಿ ನೀರಾವರಿ ನಿಗಮದವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ರಸ್ತೆಯು ಕೊರೆದು ರಸ್ತೆಯೇ ಕಾಣದಂತಾಗಿದೆ. ರೈತರ ಜಮೀನುಗಳಿಗೂ ಚರಂಡಿ ನೀರು ಹರಿಯುತ್ತಿದೆ ಎಂದು ಕೆಲವರು ಶಾಸಕರಿಗೆ ದೂರು ಹೇಳಿದರು.

ನಗರಸಭಾ ಸದಸ್ಯರುಗಳಾದ ದೊಡ್ಡಹೆಜ್ಜೂರು ರಮೇಶ್, ಶ್ರೀನಾಥ್, ಸದಸ್ಯ ಸ್ವಾಮಿಗೌಡ, ಮಲ್ಲಿಕ್‌ಪಾಷ ಮತ್ತಿತರ ಸದಸ್ಯರು ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಜನರಿಂದ ಬೈಗುಳ ತಿನ್ನುವಂತಾಗಿದೆ. ಬೀದಿ ದೀಪಗಳನ್ನು ಅಳವಡಿಸುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಬಿ ಖಾತೆ ಪಡೆಯಲು ನಗರದ ವಾಸಿಗಳು ಕಳೆದ 5 ವರ್ಷಗಳಿಂದ 2 ಪಟ್ಟು ಕಂದಾಯ ಪಾವತಿಸುವಂತೆ ಸರ್ಕಾರದಿಂದ ಆದೇಶ ಬಂದಿದ್ದು, ಇದು ಬೇರೆ ಜಿಲ್ಲೆಗಳಿಲ್ಲ ಎಂದು ಸದಸ್ಯರು ಶಾಸಕರಿಗೆ ತಿಳಿಸಿದರು. ಆಗ ಶಾಸಕರು ಮಾತನಾಡಿ, ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚಿಸಿದ್ದು, ಈ ಸಾಲಿನ ಕಂದಾಯವನ್ನು ಮಾತ್ರ 2 ಪಟ್ಟು ಕಟ್ಟುವಂತೆ ಆದೇಶ ಹೊರಬೀಳಲಿದೆ ಎಂದು ತಿಳಿಸಿದರು.

ಪೌರಾಯುಕ್ತರಾದ ಮಾನಸ, ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್, ಸದಸ್ಯರು, ಅಧಿಕಾರಿಗಳಾದ ಸಿದ್ದರಾಜು, ನಾಗರಾಜು, ನಟರಾಜು, ಶಾರದಮ್ಮ, ಲೀಲ, ಶರ್ಮಿಳಾ, ಶಮಂತ್, ಹಾಗೂ ಸಿಬ್ಬಂದಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

2 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

2 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

6 hours ago