ಮೈಸೂರು

ಹುಣಸೂರು ನಗರಸಭೆ | ದೂರುಗಳ ಸುರಿಮಳೆ ; ಪರಿಹಾರದ ಭರವಸೆ

ಹುಣಸೂರು: ನಗರಸಭೆ ಕಾರ್ಯಾಲಯದ ಕೌನ್ಸಿಲ್ ಸಾಮಾನ್ಯ ಸಭೆಯು ಬುಧವಾರ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು.

ನಗರಸಭಾಧ್ಯಕ್ಷ ಶರವಣ, ಶಾಸಕ ಹರೀಶ್ ಗೌಡ ರವರು ಹಾಜರಿದ್ದು, ತಾಳ್ಮೆಯಿಂದ ಸದಸ್ಯರ ಪ್ರಶ್ನೆಗಳನ್ನು ಆಲಿಸಿದರು. ಸಭೆ ಪ್ರಾರಂಭವಾಗುತ್ತಿದ್ದಂತೆ ಚರಂಡಿ ನೀರು ನದಿಗೆ ಸೇರಬಾರದೆಂದು ಲಕ್ಷಾಂತರ ರೂ. ಖರ್ಚು ಮಾಡಿದರೂ ನೀರಾವರಿ ನಿಗಮ ಹಾಗೂ ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದ ಹಲವು ಕಡೆ ತ್ಯಾಜ್ಯ ನೀರು ನದಿಗೆ ಸೇರುತ್ತಿದೆ. ದೂರು ನೀಡಿ ಒಂದು ವರ್ಷ ಕಳೆದರೂ ಪ್ರಯೋಜನವಾಗಿ ಎಂದು ನಗರಸಭಾ ಸದಸ್ಯ ಸಯ್ಯದ್ ಯೂನುಸ್ ದೂರಿದರು.

ಈ ಸಂಬಂಧ ಟೆಂಡರ್ ಕರೆದಿದ್ದು, ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ನಿಗಮ ಹಾಗೂ ನಗರಸಭಾ ಅಧಿಕಾರಿಗಳು ತಿಳಿಸಿದರು.

ನಗರಸಭಾ ಸದಸ್ಯ ದೇವರಾಜ್ ಮಾತನಾಡಿ, ನಗರದ ಕಲ್ಕುಣಿಕೆಯ ನಾಯಕರ ಸ್ಮಶಾನದ ರಸ್ತೆಯಲ್ಲಿ ಒಳ ಚರಂಡಿ ನೀರು ಹರಿಯುತ್ತಿದ್ದು
ಹಲವು ಬಾರಿ ನೀರಾವರಿ ನಿಗಮದವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ರಸ್ತೆಯು ಕೊರೆದು ರಸ್ತೆಯೇ ಕಾಣದಂತಾಗಿದೆ. ರೈತರ ಜಮೀನುಗಳಿಗೂ ಚರಂಡಿ ನೀರು ಹರಿಯುತ್ತಿದೆ ಎಂದು ಕೆಲವರು ಶಾಸಕರಿಗೆ ದೂರು ಹೇಳಿದರು.

ನಗರಸಭಾ ಸದಸ್ಯರುಗಳಾದ ದೊಡ್ಡಹೆಜ್ಜೂರು ರಮೇಶ್, ಶ್ರೀನಾಥ್, ಸದಸ್ಯ ಸ್ವಾಮಿಗೌಡ, ಮಲ್ಲಿಕ್‌ಪಾಷ ಮತ್ತಿತರ ಸದಸ್ಯರು ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಜನರಿಂದ ಬೈಗುಳ ತಿನ್ನುವಂತಾಗಿದೆ. ಬೀದಿ ದೀಪಗಳನ್ನು ಅಳವಡಿಸುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಬಿ ಖಾತೆ ಪಡೆಯಲು ನಗರದ ವಾಸಿಗಳು ಕಳೆದ 5 ವರ್ಷಗಳಿಂದ 2 ಪಟ್ಟು ಕಂದಾಯ ಪಾವತಿಸುವಂತೆ ಸರ್ಕಾರದಿಂದ ಆದೇಶ ಬಂದಿದ್ದು, ಇದು ಬೇರೆ ಜಿಲ್ಲೆಗಳಿಲ್ಲ ಎಂದು ಸದಸ್ಯರು ಶಾಸಕರಿಗೆ ತಿಳಿಸಿದರು. ಆಗ ಶಾಸಕರು ಮಾತನಾಡಿ, ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚಿಸಿದ್ದು, ಈ ಸಾಲಿನ ಕಂದಾಯವನ್ನು ಮಾತ್ರ 2 ಪಟ್ಟು ಕಟ್ಟುವಂತೆ ಆದೇಶ ಹೊರಬೀಳಲಿದೆ ಎಂದು ತಿಳಿಸಿದರು.

ಪೌರಾಯುಕ್ತರಾದ ಮಾನಸ, ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್, ಸದಸ್ಯರು, ಅಧಿಕಾರಿಗಳಾದ ಸಿದ್ದರಾಜು, ನಾಗರಾಜು, ನಟರಾಜು, ಶಾರದಮ್ಮ, ಲೀಲ, ಶರ್ಮಿಳಾ, ಶಮಂತ್, ಹಾಗೂ ಸಿಬ್ಬಂದಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

1 hour ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

1 hour ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

1 hour ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

4 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

5 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

5 hours ago