ಮೈಸೂರು

ಹುಣಸೂರು ನಗರಸಭೆ | ದೂರುಗಳ ಸುರಿಮಳೆ ; ಪರಿಹಾರದ ಭರವಸೆ

ಹುಣಸೂರು: ನಗರಸಭೆ ಕಾರ್ಯಾಲಯದ ಕೌನ್ಸಿಲ್ ಸಾಮಾನ್ಯ ಸಭೆಯು ಬುಧವಾರ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು.

ನಗರಸಭಾಧ್ಯಕ್ಷ ಶರವಣ, ಶಾಸಕ ಹರೀಶ್ ಗೌಡ ರವರು ಹಾಜರಿದ್ದು, ತಾಳ್ಮೆಯಿಂದ ಸದಸ್ಯರ ಪ್ರಶ್ನೆಗಳನ್ನು ಆಲಿಸಿದರು. ಸಭೆ ಪ್ರಾರಂಭವಾಗುತ್ತಿದ್ದಂತೆ ಚರಂಡಿ ನೀರು ನದಿಗೆ ಸೇರಬಾರದೆಂದು ಲಕ್ಷಾಂತರ ರೂ. ಖರ್ಚು ಮಾಡಿದರೂ ನೀರಾವರಿ ನಿಗಮ ಹಾಗೂ ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದ ಹಲವು ಕಡೆ ತ್ಯಾಜ್ಯ ನೀರು ನದಿಗೆ ಸೇರುತ್ತಿದೆ. ದೂರು ನೀಡಿ ಒಂದು ವರ್ಷ ಕಳೆದರೂ ಪ್ರಯೋಜನವಾಗಿ ಎಂದು ನಗರಸಭಾ ಸದಸ್ಯ ಸಯ್ಯದ್ ಯೂನುಸ್ ದೂರಿದರು.

ಈ ಸಂಬಂಧ ಟೆಂಡರ್ ಕರೆದಿದ್ದು, ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ನಿಗಮ ಹಾಗೂ ನಗರಸಭಾ ಅಧಿಕಾರಿಗಳು ತಿಳಿಸಿದರು.

ನಗರಸಭಾ ಸದಸ್ಯ ದೇವರಾಜ್ ಮಾತನಾಡಿ, ನಗರದ ಕಲ್ಕುಣಿಕೆಯ ನಾಯಕರ ಸ್ಮಶಾನದ ರಸ್ತೆಯಲ್ಲಿ ಒಳ ಚರಂಡಿ ನೀರು ಹರಿಯುತ್ತಿದ್ದು
ಹಲವು ಬಾರಿ ನೀರಾವರಿ ನಿಗಮದವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ರಸ್ತೆಯು ಕೊರೆದು ರಸ್ತೆಯೇ ಕಾಣದಂತಾಗಿದೆ. ರೈತರ ಜಮೀನುಗಳಿಗೂ ಚರಂಡಿ ನೀರು ಹರಿಯುತ್ತಿದೆ ಎಂದು ಕೆಲವರು ಶಾಸಕರಿಗೆ ದೂರು ಹೇಳಿದರು.

ನಗರಸಭಾ ಸದಸ್ಯರುಗಳಾದ ದೊಡ್ಡಹೆಜ್ಜೂರು ರಮೇಶ್, ಶ್ರೀನಾಥ್, ಸದಸ್ಯ ಸ್ವಾಮಿಗೌಡ, ಮಲ್ಲಿಕ್‌ಪಾಷ ಮತ್ತಿತರ ಸದಸ್ಯರು ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಜನರಿಂದ ಬೈಗುಳ ತಿನ್ನುವಂತಾಗಿದೆ. ಬೀದಿ ದೀಪಗಳನ್ನು ಅಳವಡಿಸುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಬಿ ಖಾತೆ ಪಡೆಯಲು ನಗರದ ವಾಸಿಗಳು ಕಳೆದ 5 ವರ್ಷಗಳಿಂದ 2 ಪಟ್ಟು ಕಂದಾಯ ಪಾವತಿಸುವಂತೆ ಸರ್ಕಾರದಿಂದ ಆದೇಶ ಬಂದಿದ್ದು, ಇದು ಬೇರೆ ಜಿಲ್ಲೆಗಳಿಲ್ಲ ಎಂದು ಸದಸ್ಯರು ಶಾಸಕರಿಗೆ ತಿಳಿಸಿದರು. ಆಗ ಶಾಸಕರು ಮಾತನಾಡಿ, ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚಿಸಿದ್ದು, ಈ ಸಾಲಿನ ಕಂದಾಯವನ್ನು ಮಾತ್ರ 2 ಪಟ್ಟು ಕಟ್ಟುವಂತೆ ಆದೇಶ ಹೊರಬೀಳಲಿದೆ ಎಂದು ತಿಳಿಸಿದರು.

ಪೌರಾಯುಕ್ತರಾದ ಮಾನಸ, ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್, ಸದಸ್ಯರು, ಅಧಿಕಾರಿಗಳಾದ ಸಿದ್ದರಾಜು, ನಾಗರಾಜು, ನಟರಾಜು, ಶಾರದಮ್ಮ, ಲೀಲ, ಶರ್ಮಿಳಾ, ಶಮಂತ್, ಹಾಗೂ ಸಿಬ್ಬಂದಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

28 mins ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

44 mins ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

57 mins ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

1 hour ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

1 hour ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago