ಮೈಸೂರು

ಹುಣಸೂರು ನಗರಸಭೆ | ದೂರುಗಳ ಸುರಿಮಳೆ ; ಪರಿಹಾರದ ಭರವಸೆ

ಹುಣಸೂರು: ನಗರಸಭೆ ಕಾರ್ಯಾಲಯದ ಕೌನ್ಸಿಲ್ ಸಾಮಾನ್ಯ ಸಭೆಯು ಬುಧವಾರ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು.

ನಗರಸಭಾಧ್ಯಕ್ಷ ಶರವಣ, ಶಾಸಕ ಹರೀಶ್ ಗೌಡ ರವರು ಹಾಜರಿದ್ದು, ತಾಳ್ಮೆಯಿಂದ ಸದಸ್ಯರ ಪ್ರಶ್ನೆಗಳನ್ನು ಆಲಿಸಿದರು. ಸಭೆ ಪ್ರಾರಂಭವಾಗುತ್ತಿದ್ದಂತೆ ಚರಂಡಿ ನೀರು ನದಿಗೆ ಸೇರಬಾರದೆಂದು ಲಕ್ಷಾಂತರ ರೂ. ಖರ್ಚು ಮಾಡಿದರೂ ನೀರಾವರಿ ನಿಗಮ ಹಾಗೂ ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದ ಹಲವು ಕಡೆ ತ್ಯಾಜ್ಯ ನೀರು ನದಿಗೆ ಸೇರುತ್ತಿದೆ. ದೂರು ನೀಡಿ ಒಂದು ವರ್ಷ ಕಳೆದರೂ ಪ್ರಯೋಜನವಾಗಿ ಎಂದು ನಗರಸಭಾ ಸದಸ್ಯ ಸಯ್ಯದ್ ಯೂನುಸ್ ದೂರಿದರು.

ಈ ಸಂಬಂಧ ಟೆಂಡರ್ ಕರೆದಿದ್ದು, ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ನಿಗಮ ಹಾಗೂ ನಗರಸಭಾ ಅಧಿಕಾರಿಗಳು ತಿಳಿಸಿದರು.

ನಗರಸಭಾ ಸದಸ್ಯ ದೇವರಾಜ್ ಮಾತನಾಡಿ, ನಗರದ ಕಲ್ಕುಣಿಕೆಯ ನಾಯಕರ ಸ್ಮಶಾನದ ರಸ್ತೆಯಲ್ಲಿ ಒಳ ಚರಂಡಿ ನೀರು ಹರಿಯುತ್ತಿದ್ದು
ಹಲವು ಬಾರಿ ನೀರಾವರಿ ನಿಗಮದವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ರಸ್ತೆಯು ಕೊರೆದು ರಸ್ತೆಯೇ ಕಾಣದಂತಾಗಿದೆ. ರೈತರ ಜಮೀನುಗಳಿಗೂ ಚರಂಡಿ ನೀರು ಹರಿಯುತ್ತಿದೆ ಎಂದು ಕೆಲವರು ಶಾಸಕರಿಗೆ ದೂರು ಹೇಳಿದರು.

ನಗರಸಭಾ ಸದಸ್ಯರುಗಳಾದ ದೊಡ್ಡಹೆಜ್ಜೂರು ರಮೇಶ್, ಶ್ರೀನಾಥ್, ಸದಸ್ಯ ಸ್ವಾಮಿಗೌಡ, ಮಲ್ಲಿಕ್‌ಪಾಷ ಮತ್ತಿತರ ಸದಸ್ಯರು ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಜನರಿಂದ ಬೈಗುಳ ತಿನ್ನುವಂತಾಗಿದೆ. ಬೀದಿ ದೀಪಗಳನ್ನು ಅಳವಡಿಸುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಬಿ ಖಾತೆ ಪಡೆಯಲು ನಗರದ ವಾಸಿಗಳು ಕಳೆದ 5 ವರ್ಷಗಳಿಂದ 2 ಪಟ್ಟು ಕಂದಾಯ ಪಾವತಿಸುವಂತೆ ಸರ್ಕಾರದಿಂದ ಆದೇಶ ಬಂದಿದ್ದು, ಇದು ಬೇರೆ ಜಿಲ್ಲೆಗಳಿಲ್ಲ ಎಂದು ಸದಸ್ಯರು ಶಾಸಕರಿಗೆ ತಿಳಿಸಿದರು. ಆಗ ಶಾಸಕರು ಮಾತನಾಡಿ, ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚಿಸಿದ್ದು, ಈ ಸಾಲಿನ ಕಂದಾಯವನ್ನು ಮಾತ್ರ 2 ಪಟ್ಟು ಕಟ್ಟುವಂತೆ ಆದೇಶ ಹೊರಬೀಳಲಿದೆ ಎಂದು ತಿಳಿಸಿದರು.

ಪೌರಾಯುಕ್ತರಾದ ಮಾನಸ, ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್, ಸದಸ್ಯರು, ಅಧಿಕಾರಿಗಳಾದ ಸಿದ್ದರಾಜು, ನಾಗರಾಜು, ನಟರಾಜು, ಶಾರದಮ್ಮ, ಲೀಲ, ಶರ್ಮಿಳಾ, ಶಮಂತ್, ಹಾಗೂ ಸಿಬ್ಬಂದಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago