ಹುಣಸೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಾರ್ವಜನಿಕರು ಹುಣಸೂರಿನಲ್ಲಿ ದುಪ್ಪಟ್ಟು ಹಣ ತೆತ್ತು ಖಾಸಗಿ ವಾಹನಗಳಲ್ಲಿ ಪ್ರಯಾಣ ಬೆಳೆಸಿದರು.
ನಗರದ ಹೊಸ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್ಗಳು ಬಾರದೆ ಬಿಕೋ ಎನ್ನುತ್ತಿತ್ತು. ಆದರೆ ಬೇರೆಡೆಯಿಂದ ಬಂದಿದ್ದ ಬಸ್ಗಳು ಡಿಪೋಗಳಿಗೆ ಹೋಗಲು ತೆರಳುತ್ತಿದ್ದರಿಂದ ಹಾಗೂ ಹಳ್ಳಿಗಳಲ್ಲಿ ರಾತ್ರಿ ತಂಗಿದ್ದ ಬಸ್ ಸಂಚಾರದಿಂದಾಗಿ ಬೆಳಿಗ್ಗೆ ಮೈಸೂರಿಗೆ ಬಸ್ಸುಗಳು ಸಂಚರಿಸಿದವು. ಇದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು ಕೊಂಚ ನಿಟ್ಟುಸಿರು ಬಿಟ್ಟರು.
ಬೆಳಿಗ್ಗೆ 9 ನಂತರ ಹುಣಸೂರು ನಗರದಲ್ಲಿ ಮ್ಯಾಕ್ಸಿಕ್ಯಾಬ್, ಮಿನಿಬಸ್ಗಳವರು ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಕರನ್ನು ಹತ್ತಿಸಿಕೊಂಡು ಹೋದರು.
ಸಾರಿಗೆ ಬಸ್ಗಳಲ್ಲಿ ಮೈಸೂರಿಗೆ 60 ರೂ. ಇದ್ದ ಬಸ್ ಪ್ರಯಾಣ ದರ 100 ರೂ. ಆಗಿತ್ತು. ಕೆ.ಆರ್.ನಗರ, ಕೋಟೆ ಕಡೆಗೆ ಆಟೋಗಳವರು ದುಬಾರಿ ಹಣ ಪಡೆದು ಕರೆದೊಯ್ಯುತ್ತಿದ್ದುದು ಕಂಡುಬಂದಿತು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…