ಹುಣಸೂರು: ಜಾತಿ ನಿಂದನೆ ಮಾಡಿ, ದಲಿತ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ತಹಸಿಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ರಾಮೇನಹಳ್ಳಿ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಹುಣಸೂರು ತಾಲ್ಲೂಕು ನಿಲುವಾಗಿಲು ಗ್ರಾಮದ ಸುಭಾಷ್ ಮತ್ತು ಆತನ ಕುಟುಂಬದವರು ಜಾತ್ರೆ ನೋಡಲು ಹೋಗಿದ್ದ ವೇಳೆ ನಿಲುವಾಗಿಲು ಗ್ರಾಮದ ಉಲ್ಲಾಸ್, ಚಿರಾಗ್, ಸೂರಿ, ಶಶಾಂಕ್ ಇತರೆ ಏಳು ಜನರು ದಲಿತ ಕುಟುಂಬದ ಹೆಣ್ಣು ಮಕ್ಕಳನ್ನು ಚುಡಾಯಿಸಿ, ಜಾತಿನಿಂದನೆ ಮಾಡಿ, ದಲಿತ ಹೆಣ್ಣು ಮಕ್ಕಳನ್ನು ಎಳೆದಾಡಿ, ಹಲ್ಲೆ ನಡೆಸಿದ್ದು, ಗಾಯಗೊಂಡವರು ಹುಣಸೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಭಾಷ್ ಎಂಬ ದಲಿತ ಹುಡುಗ ಇದರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಮೊಬೈಲ್ಅನ್ನು ಕಿತ್ತುಕೊಂಡು ಸುಭಾಷ್ ಹಾಗೂ ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ಹಲ್ಲೆ ಮಾಡಿದವರ ಮೇಲೆ ಜಾತಿ ದೌರ್ಜನ್ಯದ ಕಾಯಿದೆ ಅಡಿ ಕೇಸು ದಾಖಲಿಸಿ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ನೊಂದ ಗಾಯಾಳುಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್, ವಿ.ಬಸವರಾಜು ಕಲ್ಕುಣಿಕೆ, ಶಿವರಾಮು ಹೆಚ್.ಎಸ್.ಮಹದೇವು ತಮ್ಮಡಹಳ್ಳಿ, ಸಂತೋಷ್, ರಾಜು, ಸಿದ್ದರಾಜು, ಲೋಕೇಶ್ ನಿಲುವಾಗಿಲು, ಮಹದೇವ ಬನ್ನಿಕುಪ್ಪೆ, ಯಶವಂತ್, ಕಿಶೋರ್, ಅವಿನಾಶ್, ವೈ.ರಾಜು ಹಾಗೂ ನಿಲುವಾಗಿಲು ಗ್ರಾಮಸ್ಥರು ಹಾಜರಿದ್ದರು.
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…