ಮೈಸೂರು

ಹುಣಸೂರು: ಲಕ್ಷ್ಮಣತೀರ್ಥ ನದಿಪಾತ್ರದಲ್ಲಿ ರೆಡ್‌ ಅಲರ್ಟ್‌, ಕಾಳಜಿ ಕೇಂದ್ರಕ್ಕೆ ತೆರಳುವಂತೆ ಅಧಿಕಾರಿಗಳ ಮನವಿ

ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.

ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ ಹರಿವು ದಿನೇ ದಿನೇ ಹೆಚ್ಚುತ್ತಿದೆ. ಹಿನ್ನೆಲೆ ತಾಲೂಕಿನ ಅಣೆಕಟ್ಟು ಮೇಲೆ ನೀರು ಹರಿಯಲಾರಂಭಿಸಿವೆ.

ಹೀಗಾಗಿ ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ನದಿ ಪಾತ್ರದಲ್ಲಿ ರೆಟ್‌ ಅಲರ್ಟ್‌ ಘೋಷಿಸಿದ್ದು, ನದಿ ಅಂಚಿನ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೊಡಗು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಡಿಕೇರಿಯ ಜಲಾಶಯಗಳು ತುಂಬಿ ಹೋಗಿವೆ.
ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕಾವೇರಿ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣವೂ ಹೆಚ್ಚಿದೆ. ಕೆಆರ್‌ಎಸ್‌ ನಿಂದ ಬುಧವಾರ ರಾತ್ರಿ ೧.೭೨ ಲಕ್ಷ ಕ್ಯೂಸೆಕ್ಸ್‌ನಷ್ಟು ನೀರನ್ನು ಹೊರಬಿಡಾಗಿದೆ. ಇದರಿಂದ ಐತಿಹಾಸಿಕ ಶ್ರೀರಂಗಪಟ್ಟಣ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

5 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

6 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

6 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

6 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

6 hours ago